ಬಂಟ್ವಾಳ

ಸಜೀಪಮುನ್ನೂರು ಶ್ರೀ ಶಾರದಾ ಯುವಕ ಮಂಡಲ ಶ್ರೀಕೃಷ್ಣಜನ್ಮಾಷ್ಟಮಿ ಸುವರ್ಣಮಹೋತ್ಸವ ನಿಮಿತ್ತ ಹಲವು ಕಾರ್ಯಕ್ರಮ

ಜಾಹೀರಾತು

..

ಸಜಿಪಮುನ್ನೂರು ಗ್ರಾಮದ ಶಾರದಾನಗರದ ಶ್ರೀ ಶಾರದಾ ಯುವಕ ಮಂಡಲ ವತಿಯಿಂದ ಶ್ರೀಕೃಷ್ಣಜನ್ಮಾಷ್ಟಮಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, 26 ರಿಂದ 28 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ಯುವಕ ಮಂಡಲದ ಆಧ್ಯಕ್ಷ ಪರಮೇಶ್ವರ ಶಾರದಾ ನಗರ ಅವರು ತಿಳಿಸಿದ್ದಾರೆ.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 1975 ರಿಂದ ಸದಾನಂದ ಪೂಜಾರಿ ಹಾಗೂ ಗೆಳೆಯರೊಂದಿಗೆ ಸೇರಿಕೊಂಡು ಶಾರದಾ ನಗರದಲ್ಲಿ ಶ್ರೀಕೃಷ್ಣಾಷ್ಟಮಿ ಮೊಸರು ಕುಡಿಕೆಯನ್ನು ಶ್ರೀ ಶಾರದಾ ಕ್ರೀಡಾ ಕೂಟ ಸಂಘದ ವತಿಯಿಂದ ಆಯೋಜನೆ ಮಾಡಿಕೊಂಡು ಬರುತ್ತಿದ್ದರು. ಕೆಲವು ವರ್ಷಗಳ ನಂತರ ಶ್ರೀ ಶಾರದಾ ಯುವಕ ಮಂಡಲ(ರಿ) ಶಾರದಾನಗರ ಎಂದು ಮರುನಾಮಕರಣವಾಗಿ ಶ್ರೀ ಶಾರದಾ ಕ್ರೀಡಾಂಗಣದಲ್ಲಿ ಇಲ್ಲಿಯವರೆಗೆ ಶ್ರೀ ಕೃಷ್ಣಾ ಜನ್ಮಾಷ್ಟಮಿಯ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದ್ದೇವೆ ಎಂದರು

.26 ನೇ ಸೋಮವಾರ ಬೆಳಿಗ್ಗೆ ಗಣಹೋಮ ಶ್ರೀ ಶಾರದಾಬಿಕಾ ಮಂದಿರದಿಂದ ಶ್ರೀ ಶಾರದಾ ಕ್ರೀಡಾಂಗಣಕ್ಕೆ ಪುಟಾಣಿ ಮಕ್ಕಳ ಶ್ರೀಕೃಷ್ಣ ವೇಷ, ಚೆಂಡೆ, ಗೊಂಬೆ ಕುಣಿತ, ಕಳಸಗಳನ್ನು ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿಬರಲಿದೆ. ಬಳಿಕ ಕ್ರೀಡಾಕೂಟ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ,ಹಾಗೂ ಪ್ರತಿ ದಿನ ಸಮಾರೋಪ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.
. 27 ಮಂಗಳವಾರ ಬೆಳಿಗ್ಗೆ 9 ಗಂಟೆಗೆಕೆಸರ್ ಗೊಬ್ಬು, ಕೆಸರು ಗದ್ದೆಯಲ್ಲಿ ಮುಕ್ತ ವಾಲಿಬಾಲ್ ಹಗ್ಗ ಜಗ್ಗಾಟ, ತ್ರೋಬಾಲ್, ಹಾಗೂ ಇನ್ನಿತರ ಪಂದ್ಯಾಕೂಟ ನಡೆಯಲಿರುವುದು. ಸಂಜೆ ಸ್ಥಳಿಯ ಮಕ್ಕಳಿಂದ ಸಾಂಸ್ಕೃತಿಕ ಸಮಾರಂಭ ಹಾಗೂ ನಮ್ಮ ಕಲಾವಿದೆರ್ ಬೆದ್ರ ತಂಡದ ಉಮೇಶ್ ಮಿಜಾರು ಬಳಗದಿಂದತೆಲಿಕೆದ ಗೊಂಚಿಲ್ಹಾಸ್ಯಕಾರ್ಯಕ್ರಮ ನಡೆಯಲಿದೆ.
.28 ಬುಧವಾರ ಸಂಜೆ ಗಂಟೆ 6ಕ್ಕೆ ಸಮಾರೋಪ ಸಮಾರಂಭದಲ್ಲಿ ರಾಜಕೀಯ ಮುಖಂಡರು, ಸಾಮಾಜಿಕ ಮುಖಂಡರು ಹಾಗೂ ಗಣ್ಯವ್ಯಕ್ತಿಗಳ ಉಪಸ್ಥಿತಿಯಲ್ಲಿ ನಡೆಯಲಿದ್ದು, ರಾಷ್ಟ್ರಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿಗಳನ್ನು ಪಡೆದ ಮಹಾನಿಯರಿಗೆ ಗೌರವ ಅರ್ಪಣೆ. 2023, 2024 ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ, ಬಹುಮಾನ ವಿತರಣೆ ಹಾಗೂ ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಲಕ್ಕಿಡಿಪ್ ಡ್ರಾ ಕಾರ್ಯಕ್ರಮ ವೇದಿಕೆಯಲ್ಲಿ ಮಾಡಲಾಗುವುದು. ರಾತ್ರಿ ಗಂಟೆ 9ಕ್ಕೆ ಚಾಪರ್ಕ ಕಲಾವಿದರಿಂದ ವಿಭಿನ್ನ ಶೈಲಿಯ ನಾಟಕ ರಾಜ್ಯ ಪ್ರಶಸ್ತಿ ವಿಜೇತ ಡಾ| ದೇವದಾಸ ಕಾಪಿಕಾಡು ರಚಿಸಿ ನಿರ್ದೇಶಿಸಿರುವಪನಿಯರೆ ಅವಂದಿನನಾಟಕ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗೌರವ ಅಧ್ಯಕ್ಷರಾದ ತಿಮ್ಮಪ್ಪ ಬೆಳ್ಳಾಡ, ಲೆಕ್ಕ ಪರಿಶೋಧಕರಾದ ವಿಜೇಶ್ ಕುಮಾರ್, ಕುಡಾರ್ಲಚ್ಚಿಲ್, ಪ್ರಸಾದ್ ಪೂಜಾರಿ ಕುಡಾರ್ಲಚ್ಚಿಲ್, ಸದಸ್ಯರಾದ ಶಿವಾನಂದ ಕುಡಾರ್ಲಚ್ಚಿಲ್ ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago