ರಾಜ್ಯಪಾಲ ವಜಾ ಒತ್ತಾಯಿಸಿ ಸಿಪಿಐ ನಿಂದ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ

ರಾಜ್ಯಪಾಲರ ಹುದ್ದೆಯನ್ನು ರದ್ದುಗೊಳಿಸಲು ಸಂವಿಧಾನಾತ್ಮಕವಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಬಂಟ್ವಾಳ ತಾಲೂಕು ಸಮಿತಿ ನೇತೃತ್ವದಲ್ಲಿ ಬಿಸಿರೋಡಿನ ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಯಿತು.

ಸಿಪಿಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ಮಾತನಾಡಿ ಕರ್ನಾಟಕದ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಜನತಂತ್ರ ವ್ಯವಸ್ಥೆಯಲ್ಲಿ ಜನರಿಂದ ಬಹುಮತ ಪಡೆದು ಆಯ್ಕೆಯಾದ ಒಂದು ಚುನಾಯಿತ ರಾಜ್ಯ ಸರಕಾರವನ್ನು ಕೇಂದ್ರ ಸರ್ಕಾರದಿಂದ ನೇಮಕ ಮಾಡಲ್ಪಟ್ಟ ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸುತ್ತಿರುವುದು ಗೊತ್ತಾಗುತ್ತದೆ ಎಂದರು.

ಮುಡಾ, ವಾಲ್ಮೀಕಿ ನಿಗಮ ಪ್ರಕರಣ ನ್ಯಾಯಾಂಗ ಚೌಕಟ್ಟಿನಲ್ಲಿ ತನಿಖೆ ಆಗಬೇಕು ಎಂದು ಒತ್ತಾಯಿಸಿದ ಅವರು, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂ಼ಶನ್ ಗೆ ಅನುಮತಿ ನೀಡುವ ಸಂದರ್ಭ ರಾಜ್ಯಪಾಲರ ಕಚೇರಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಒತ್ತಡಕ್ಕೆ ಮಣಿದು ತೀರ್ಮಾನ ಕೈಗೊಂಡಿರುವುದು ಸ್ವಷ್ಟವಾಗಿ ಕಂಡುಬರುತ್ತಿದೆ ಎಂದರು,

ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್ ಮಾತನಾಡಿ,ಈಗಾಗಲೇ ದೇಶಾದ್ಯಂತ ಕರ್ನಾಟಕ ಸೇರಿದಂತೆ ತಮಿಳುನಾಡು, ಕೇರಳ, ಪಾಂಡಿಚೇರಿ, ಪಶ್ಚಿಮ ಬಂಗಾಳ, ರಾಜಸ್ಥಾನ ಇತ್ಯಾದಿ ರಾಜ್ಯಗಳಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಬಹಿರಂಗವಾಗಿಯೇ ಸಂಘರ್ಷ ನಡೆದಿರುವುದು ಕಂಡುಬಂದಿದೆ.  ಎಂದರು.

ಪ್ರತಿಭಟನೆಗೆ ಮುನ್ನು ಪಕ್ಷದ ಬಿಸಿರೋಡು ಕಚೇರಿಯಿಂದ ಮೆರವಣಿಗೆ ನಡೆಸಲಾಯಿತು.  ಸೇತೃತ್ವವನ್ನು ಸಿಪಿಐ ತಾಲೂಕು ಸಮಿತಿ ಸದಸ್ಯ ಎಂ ರಾಮ ಮುಗೇರ,  ಉಮಾಮತಿ ಕುರ್ನಾಡು, ಶಮಿತ, ಸರೋಜಿನಿ ಕುರಿಯಾಳ, ಭಾರತೀಯ ಮಹಿಳಾ ಒಕ್ಕೂಟದ ನಾಯಕಿ  ಕೇಶವತಿ, ರೇವತಿ ಎಸ್, ಮೋಹಿನಿ, ನಯನ ಕೆ,  ಭೋಜ ಕರಂಬೇರ, ಎಂಬಿ.ಬಾಸ್ಕರ, ಯುವಜನ ಫೆಡರೇಶನ್ (ಎಐವೈಎಫ್) ನ ಹರ್ಷಿತ್, ಮೋಹನ ಅರಳ, ಸೀತರಾಮ ವಿಟ್ಲ. ಓ.ಕೃಷ್ಣ,  ಮುಂತಾದವರು ವಹಿಸಿದ್ದರು. ಸಿಪಿಐ ಬಂಟ್ವಾಳ ತಾಲೂಕು ಸಹಕಾರ್ಯದರ್ಶಿ ಪ್ರೇಮನಾಥ ಕೆ ಸ್ವಾಗತಿಸಿದರು, ಭಾರತಿ ಪ್ರಶಾಂತ್ ಧನ್ಯವಾವಿತ್ತರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ರಾಜ್ಯಪಾಲ ವಜಾ ಒತ್ತಾಯಿಸಿ ಸಿಪಿಐ ನಿಂದ ಬಿ.ಸಿ.ರೋಡಿನಲ್ಲಿ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*