ಕೃಷಿ ಜಮೀನು ಪಹಣಿಗೆ ಆಧಾರ್ ಲಿಂಕ್: ಗ್ರಾಮಾಡಳಿತ ಅಧಿಕಾರಿ ಸಂಪರ್ಕಕ್ಕೆ ಸೂಚನೆ

ಬಂಟ್ವಾಳ: ಕೃಷಿಕರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕೃಷಿ ಜಮೀನುಗಳ ಪಹಣಿಗಳಿಗೆ ಆಧಾರ್ ಮಾಹಿತಿಯನ್ನು ಜೋಡಣೆ ಮಾಡುವ ಮಾನ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆ ಪ್ರಗತಿಯಲ್ಲಿದ್ದು, ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿಯಲ್ಲಿ ಆಧಾರ್ ಸೀಡಿಂಗ್ ಕಾರ್ಯ ನಡೆಯುತ್ತಿದೆ. ಯೋಜನೆಯ ಅನುಷ್ಠಾನದಲ್ಲಿ ಪ್ರಗತಿ ಸಾಧಿಸಲು ಕೃಷಿ ಭೂಮಿ ಹೊಂದಿರುವ ಎಲ್ಲಾ ರೈತರೂ ತಮ್ಮ ತಮ್ಮ ಆಧಾರ್ ಕಾರ್ಡ್, ಪಹಣಿ ಪತ್ರ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಗಳ ಜೊತೆ ಕೂಡಲೇ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿಯನ್ನು ಸಂಪರ್ಕಿಸುವುದು ಮತ್ತು ಜಂಟಿ ಖಾತೆ ಹೊಂದಿದ್ದಲ್ಲಿ, ಎಲ್ಲಾ ಖಾತಾದಾರರ ಆಧಾರ್ ಕಾರ್ಡ್ ನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗುವುದು ಅಗತ್ಯವಾಗಿರುತ್ತದೆ ಎಂದು ತಾಲೂಕಾಡಳಿತ ಪ್ರಕಟಣೆ ತಿಳಿಸಿದೆ. 

ಬಂಟ್ವಾಳ ತಾಲೂಕಿನಲ್ಲಿ ಪಹಣಿಗೆ ಆಧಾರ್ ಜೋಡಿಸುವ ಕಾರ್ಯಕ್ಕೆ ಸಂಬಂಧಪಟ್ಟಂತೆ ಒಂದು ವಾರದ ಆಂದೋಲನ ಹಮ್ಮಿಕೊಳ್ಳಲಾಗಿರುತ್ತದೆ. ಸೆ.8ರೊಳಗಾಗಿ ಎಲ್ಲಾ ಕೃಷಿಕರೂ ಕಡ್ಡಾಯವಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಸದ್ರಿ ಆಂದೋಲನ ಯಶಸ್ವಿಯಾಗುವಲ್ಲಿ ಸಹಕರಿಸಬೇಕಾಗಿ ಕೋರಿದೆ. ತಮ್ಮ ಪರಿಚಿತರಿಗೆ, ಬೇರೆ ಊರುಗಳಲ್ಲಿ ವಾಸಿಸುತ್ತಿರುವ ಕುಟುಂಬಸ್ಥರಿಗೆ ಮತ್ತು ಸಂಬಂಧಪಟ್ಟ ಎಲ್ಲಾ ಕೃಷಿಕರಿಗೂ ಈ ಬಗ್ಗೆ ಮಾಹಿತಿ ನೀಡಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸುವಲ್ಲಿ ಕೈ ಜೋಡಿಸಬೇಕಾಗಿ ತಿಳಿಸಿದೆ.

 

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೃಷಿ ಜಮೀನು ಪಹಣಿಗೆ ಆಧಾರ್ ಲಿಂಕ್: ಗ್ರಾಮಾಡಳಿತ ಅಧಿಕಾರಿ ಸಂಪರ್ಕಕ್ಕೆ ಸೂಚನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*