ಜಿಲ್ಲಾ ಸುದ್ದಿ

ಕೇಂದ್ರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಸ್ತೆಗಳ ಅಭಿವೃದ್ದಿಗೆ 42 ಕೋಟಿ ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 42 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಜಾಹೀರಾತು

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾ.ಚೌಟ ಅವರು, ಕೇಂದ್ರ ಸರ್ಕಾರವು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ(CRIF) ಅಡಿ ಈ ಅನುದಾನ ನೀಡಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಸುಮಾರು 74.30 ಕಿಲೋ ಮೀಟರ್ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಈ ಎಲ್ಲಾ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ 42 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಇದೇ ವೇಳೆ ತಿಳಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಯಾವೆಲ್ಲಾ ರಸ್ತೆಗಳ ಅಭಿವೃದ್ದಿ ಕಾಮಗಾರಿ
ಮಂಗಳೂರು ತಾಲೂಕು ವ್ಯಾಪ್ತಿಯ ಮಾಣಿ-ಉಳ್ಳಾಲ ರಾಜ್ಯ ಹೆದ್ದಾರಿಯಲ್ಲಿ5.7 ಕಿ.ಮೀ ರಸ್ತೆ ನವೀಕರಣಕ್ಕೆ 3.42 ಕೋ.ರೂ.;
ಉಚ್ಚಿಲ-ದೇರಳಕಟ್ಟೆ ಜಿಲ್ಲಾ ರಸ್ತೆಯ 1 ಕಿ.ಮೀ. ನವೀಕರಣಕ್ಕೆ 60 ಲಕ್ಷ ರೂ.;
ಪೆರ್ಮನ್ನೂರು-ಪಾವೂರು ರಸ್ತೆ 1.1 ಕಿ.ಮೀ. ನವೀಕರಣಕ್ಕೆ66 ಲಕ್ಷ ರೂ.;
ಕೋಟೆಕಾರು – ಪಾತೂರು 2.2 ಕಿ.ಮೀ ರಸ್ತೆಗೆ
1.32 ಕೋ.ರೂ
ರಾಜ್ಯ ಹೆದ್ದಾರಿ 64ರ ಕಡೂರು-ಕಾಞಂಗಾಡ್ 2.25ಕಿ.ಮೀ. ರಸ್ತೆಗೆ 1.35 ಕೋ.ರೂ.
ಬಂಟ್ವಾಳ ವ್ಯಾಪ್ತಿಯಲ್ಲಿ ಸುರತ್ಕಲ್ -ಕಬಕ 3.33 ಕಿ.ಮೀ. ರಸ್ತೆ ಕಾಮಗಾರಿಗೆ 2 ಕೋ.ರೂ
ಪಾಣೆಮಂಗಳೂರು-ಪಾತೂರು 3.2 ಕಿ.ಮೀ ರಸ್ತೆಗೆ 1.92 ಕೋ.ರೂ.
ಮಾರಿಪಳ್ಳ-ಕಲ್ಪನೆ 1.22 ಕಿ.ಮೀ. ರಸ್ತೆಗೆ 73 ಲ.ರೂ.
ನಿಂತಿಕಲ್ಲು-ಬೆಳ್ಳಾರೆ-ನೆಟ್ಟಾರು 6.2 ಕಿ.ಮೀ. ರಸ್ತೆ ಮೇಲ್ದರ್ಜೆಗೇರಿಸಲು 3.72 ಕೋ.ರೂ.
ಸುಳ್ಯ-ಪೈಚಾರು-ಬೆಳ್ಳಾರೆ 3.8 ಕಿಮೀ ರಸ್ತೆ ಮೇಲ್ದರ್ಜೆಗೇರಿಸಲು 2.28 ಕೋ.ರೂ.
ರಾಜ್ಯ ಹೆದ್ದಾರಿ ಸುಬ್ರಹ್ಮಣ್ಯ-ಮಂಜೇಶ್ವರದ 5.2 ಕಿಮೀ ರಸ್ತೆಗೆ 3.12ಕೋ.ರೂ.
ಪುತ್ತೂರು ತಾಲೂಕಿನ ನಿಂತಿಕಲ್ಲು-ಬೆಳ್ಳಾರೆ-ನೆಟ್ಟಾರು-ಅಮ್ಚಿನಡ್ಕ-ಕಾವು-ಈಶ್ವರಮಂಗಲ-ಪಲ್ಲತ್ತಾರು ರಾಜ್ಯ ಹೆದ್ದಾರಿಯಿಂದ ಜಿಲ್ಲಾರಸ್ತೆಗೆ ಸಂಪರ್ಕದ 4.8 ಕಿ.ಮೀ ರಸ್ತೆ ಕಾಮಗಾರಿಗೆ 2.88 ಕೋ.ರೂ.
ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ-ಉಪ್ಪಿನಂಗಡಿ 10 ಕಿಮೀ ರಸ್ತೆ ಕಾಮಗಾರಿಗಳಿಗೆ 6 ಕೋ.ರೂ.
ಮಂಗಳೂರು ತಾಲೂಕಿನ ಪುನರೂರು-ಶಾಂತಿಪಲ್ಕೆ-ದಾಮಸ್ಕಟ್ಟೆಯ 11.7 ಕಿ.ಮೀ.ರಸ್ತೆ ನವೀಕರಣಕ್ಕೆ 6 ಕೋ.ರೂ
ಮಂಗಳೂರು ತಾಲೂಕಿನ ಭಟ್ರಕೆರೆ-ಕತ್ತಲ್ಸರ್ -ಕುಕ್ಕುದಕಟ್ಟೆ-
ನೀರ್ಕೆರೆ-ತೋಡಾರು -ಮಾಸ್ತಿಕಟ್ಟೆ 6.1 ಕಿ.ಮೀ. ಜಿಲ್ಲಾ ರಸ್ತೆಗೆ 3ಕೋ.ರೂ.
ಸಂಪಿಗೆ-ಅಶ್ವಥಪುರ -ನೀರ್ಕೆರೆ –
ಮಿಜಾರು 6.5ಕಿ.ಮೀ. ಜಿಲ್ಲಾ ರಸ್ತೆ ಅಭಿವೃದ್ದಿಗೆ 3ಕೋ.ರೂ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

19 minutes ago