ಬಂಟ್ವಾಳ

ಮೆಲ್ಕಾರ್: ಸರಕಾರಿ ಶಾಲೆಗೆ ನನ್ನ ಕೈಕಾಣಿಕೆ ಯೋಜನೆ ಆರಂಭ

https://www.bantwalnews.com

ಬಂಟ್ವಾಳ: ಉನ್ನತ ಕೆಲಸಗಳು ಸಣ್ಣ ಸಣ್ಣ ದೇಣಿಗೆಗಳಿಂದಲೇ ಆರಂಭವಾಗುತ್ತವೆ ಹತ್ತು ಹಲವು ಕೈಗಳು ಜೊತೆಯಾಗಿ ಸೇರಿದಾಗ ಯಾವ ಅಭಿವೃದ್ಧಿ ಕೆಲಸವು ನಿರಾಯಾಸವಾಗಿ ನಡೆಯಲು ಸಾಧ್ಯವಾ ಗುತ್ತದೆ ಎಂದು ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಹೇಳಿದರು.

ಮೆಲ್ಕಾರ್ ನ  ಚಂದ್ರಿಕಾ ವೆಜಿಟೇಬಲ್ಸ್ ಮೇಲ್ಕಾರ್ ನಲ್ಲಿ ಸರಕಾರಿ ಶಾಲೆಗೆ ನನ್ನ ಕೈ ಕಾಣಿಕೆ ಎಂಬ ವಿನೂತನ ಕಾರ್ಯಕ್ರಮದಲ್ಲಿ ದೇಣಿಗೆಯಾಗಿ ತಮ್ಮ ಕಿರು ಕಾಣಿಕೆಯನ್ನು ನೀಡಿ ಮಾತನಾಡಿದರು

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮಹತ್ತರವಾದದ್ದು ಶಿಕ್ಷಣದಿಂದ ಮಾತ್ರವೇ ಎಲ್ಲಾ ರೀತಿಯ ಬೆಳವಣಿಗೆಯನ್ನು ಹೊಂದಲು ಸಾಧ್ಯ ಈ ಪ್ರಕಾರವಾಗಿ ಸರ್ಕಾರಿ ಶಾಲೆಗಳ ಕೆಲಸವು ಮಾದರಿಯಾಗಿದೆ ಹಾಗೂ ಸೇವಾ ನಿರತರಾಗಿ ತೊಡಗಿಕೊಂಡಿರುವ ಶಿಕ್ಷಕ ವರ್ಗವು ಇದಕ್ಕೆ ಉತ್ತಮ ಉದಾಹರಣೆ ಅಲ್ಲದೆ ಸಾರ್ವಜನಿಕವಾಗಿ ವಿದ್ಯಾ ಆಸಕ್ತ ಮಹನೀಯರು ನೀಡುವ ಕೊಡುಗೆಗಳು ಒಂದು ಸಂಸ್ಥೆಯನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತವೆ ಇಂದಿನ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಹಾಗೂ ಅದಕ್ಕೆ ಪೂರಕವಾದ ವಾತಾವರಣವನ್ನು ಕೊಡುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.

ಈ ಸಂದರ್ಭ ಬಂಟ್ವಾಳ ಪುರಸಭೆಯ ಮಾಜಿ ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ರಾಜ್ಯ ಮಟ್ಟದ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸಂಗೀತ ಶರ್ಮಾ ಪಿ ಜಿ , ಚಂದ್ರಿಕಾ ವೆಜಿಟೇಬಲ್ ಮೆಲ್ಕಾರ್ ಮಾಲಕ ಮಹಮ್ಮದ್  ಶರೀಫ್, ಸಹೋದರ ಮಹಮ್ಮದ್  ನಝೀರ್ ಮೊದಲಾದವರು ಉಪಸ್ಥಿತರಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ