ಕಲ್ಲಡ್ಕ

ವೀರಕಂಭ ಗ್ರಾಮದ ಕೆಲಿಂಜದಲ್ಲಿ 48ನೇ ವರ್ಷದ ಗಣೇಶೋತ್ಸವ

ಹಬ್ಬ ಆಚರಣೆಗಳು ನಮ್ಮ ಮೂಲ ಸಂಸ್ಕೃತಿ ಉಳಿಸುವ ದೃಷ್ಟಿಕೋನದಲ್ಲಿ  ಆಗಬೇಕು. ಮಕ್ಕಳನ್ನು ಪ್ರಾಥಮಿಕ ಹಂತದಲ್ಲಿ ಹಬ್ಬ ಆಚರಣೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿ ನಮ್ಮ ಆಚಾರ,ಸಂಸ್ಕಾರ ಸಂಸ್ಕೃತಿಯನ್ನು ತಿಳಿವಂತೆ ಮಾಡಬೇಕು ಎಂದು ಶಿಕ್ಷಕಿ ಸಂಪನ್ಮೂಲ ವ್ಯಕ್ತಿ ರೇಣುಕಾ ಕಣಿಯೂರ್ ಹೇಳಿದರು.

ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಕೆಲಿಂಜ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ ನಡೆದ 48ನೇ ವರ್ಷದ ಗಣೇಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸಂದೀಪ್ ಪೂಜಾರಿ ವಹಿಸಿದ್ದರು. ಈ ಸಂದರ್ಭ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಉದ್ಯಮಿ ಪ್ರೀತಿಶ್ ತೊಕ್ಕೊಟ್ಟು, ಕಾರ್ತಿಕ್ ಭಂಡಾರಿ ಬೆಂಗಳೂರು, ಹಿಂದೂ ಧಾರ್ಮಿಕ ಸೇವಾ ಸಮಿತಿ ಕೆಲಿಂಜ ದ ಅಧ್ಯಕ್ಷ ರಾಜೇಂದ್ರ ಟೈಲರ್ ನಗ್ರಿಮೊಲೆ. ಮಾಜಿ ಅಧ್ಯಕ್ಷ ದೇವದಾಸ ರೈ ಮಾಡದಾರು, ಮೊದಲಾದವರು ಉಪಸ್ಥಿತರಿದ್ದರು. ಜಗದೀಶ್ ರೈ ನಡುವಳಚ್ಚಿಲ್ ಸ್ವಾಗತಿಸಿ, ಶ್ರೀಧರ ಗೌಡ ನಡುವಳಚ್ಚಿಲ್ ವಂದಿಸಿ, ತೀರ್ಥೇಶ್ ಮಾಡದಾರು ಕಾರ್ಯಕ್ರಮ ನಿರೂಪಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ