ಬಂಟ್ವಾಳ

ರಾಯಿ: 13ನೇ ವರ್ಷದ ಗಣೇಶೋತ್ಸವ, 13 ಹಣ್ಣಿನ ಗಿಡಗಳ ವಿತರಣೆ

ಜಗತ್ತಿನ ವಿವಿಧೆಡೆ ಗಣಪತಿ ದೇವರ ಆರಾಧನೆ ನಡೆಯುವ ಮೂಲಕ ಸಾಮರಸ್ಯ ಮತ್ತು ಪ್ರಕೃತಿ ಆರಾಧನೆಯ ಮಹತ್ವ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಇಲ್ಲಿನ ರಾಯಿ ಪೇಟೆಯಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ನಡೆದ ೧೩ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.ಇದೇ ವೇಳೆ 13 ಮಂದಿ ಭಕ್ತರಿಗೆ ಹಣ್ಣಿನ ಗಿಡ ವಿತರಿಸಲಾಯಿತು.


ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ, ಮುಖ್ಯಶಿಕ್ಷಕಿ ಸುಜಾತ ರಾಯಿ, ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಉದ್ಯಮಿ ರಂಜನ್ ಕುಮಾರ್ ಶೆಟ್ಟಿ ಅರಳ ಶುಭ ಹಾರೈಸಿದರು. ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಮುಡ್ರಾಯಿಬೀಡು, ಪ್ರಧಾನ ಕಾರ್ಯದರ್ಶಿ ಸಚ್ಚಿದಾನಂದ ಕೊಯಿಲ, ಪ್ರಮುಖರಾದ ಕೆ.ರಮೇಶ ನಾಯಕ ರಾಯಿ, ಟಿ.ಅನಿಲ್ ಕುಮಾರ್ ಪ್ರಭು, ಸುಧೀರ್ ಶೆಟ್ಟಿ ರಾಯಿ, ಪ್ರಕಾಶ್ ಕುಮಾರ್ ಜೈನ್, ರಾಮಸುಂದರ ಗೌಡ, ಸೋಮಪ್ಪ ಮಡಿವಾಳ, ಮೋಹನ ಗೌಡ ಕಲ್ಮಂಜ, ಸೋಮಶೇಖರ ರೈ, ನಾರಾಯಣ ಗೌಡ ಮೀಯಾಲು, ಸತೀಶ್ ಕುಮಾರ್ ಕೊಯಿಲ, ಯಶೋಧರ ರೈ ದೇರಾಜೆ, ಜಯಲಕ್ಷ್ಮಿ ಮಾಬೆಟ್ಟು, ರಾಘವೇಂದ್ರ ಪೂಜಾರಿ ರಾಯಿ, ಕೊರಗಪ್ಪ ಪೂಜಾರಿ, ಮೋಹನ ರಾಯಿ, ರುಕ್ಕಯ ಬಂಗೇರ, ಪರಮೇಶ್ವರ ಪೂಜಾರಿ ಮತ್ತಿತರರು ಇದ್ದರು.
ಸಮಿತಿ ಗೌರವಾಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ ಸ್ವಾಗತಿಸಿ, ಉಪಾಧ್ಯಕ್ಷ ಸದಾನಂದ ಸೀತಾಳ ವಂದಿಸಿದರು. ಸಮಿತಿ ಸಂಚಾಲಕ ಜಗದೀಶ ಕೊಯಿಲ ಮತ್ತು ಕೋಶಾಧಿಕಾರಿ ಚಂದ್ರಶೇಖರ ಆಚಾರ್ಯ ಬೈದಗುತ್ತು ಕಾರ್ಯಕ್ರಮ ನಿರೂಪಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ