ಬಂಟ್ವಾಳ

ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಮಾನವ ಸರಪಳಿ – ಯಶಸ್ಸುಗೊಳಿಸಲು ಪೂರ್ವಭಾವಿ ಸಭೆ

ಬಂಟ್ವಾಳ: ಪ್ರಜಾಪ್ರಭುತ್ವ ದಿನಾಚರಣೆಯ ಹಿನ್ನೆಲೆಯಲ್ಲಿ ಸೆ. 15ರಂದು ಬೆಳಗ್ಗೆ ರಾಜ್ಯಾದ್ಯಂತ ಮಾನವ ಸರಪಳಿ ರಚನೆಗೊಳ್ಳಲಿದ್ದು, ಬಂಟ್ವಾಳ ತಾಲೂಕು ಮಟ್ಟದ ಮಾನವ ಸರಪಳಿ ರಚನೆಯ ಕಾರ್ಯಕ್ರಮದ ಯಶಸ್ಸಿನ ಹಿನ್ನೆಲೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಪೂರ್ವಭಾವಿ ಸಭೆ ಮಂಗಳವಾರ ಬಂಟ್ವಾಳ ತಾ.ಪಂ.ನ ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ನೇತೃತ್ವದಲ್ಲಿ ನಡೆಯಿತು.

ಬಂಟ್ವಾಳ ತಾಲೂಕು ಮಟ್ಟದ ಮಾನವ ಸರಪಳಿಯು ಫರಂಗಿಪೇಟೆಯಿಂದ ಮಿತ್ತೂರುವರೆಗೆ ಸುಮಾರು ೨೧ ಕಿ.ಮೀ.ಗಳ ಅಂತರದಲ್ಲಿ ರಚನೆಗೊಳ್ಳಲಿದ್ದು, ಕಿ.ಮೀ.ಗೆ ೮೦೦ ಮಂದಿ ಪಾಲ್ಗೊಳ್ಳಬೇಕಾಗುತ್ತದೆ. ಈ ವ್ಯಾಪ್ತಿಯಲ್ಲಿ ಹೆದ್ದಾರಿ ಕಾಮಗಾರಿ ಕೂಡ ನಡೆಯುತ್ತಿರುವುದರಿಂದ ಆ ಭಾಗಗಳಲ್ಲಿ ವಾಹನ ರ್‍ಯಾಲಿ ನಡೆಸುವುದಕ್ಕೆ ಜಿಲ್ಲಾಡಳಿತ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಟೋ ಸಂಘಟನೆಯವರು ರ್‍ಯಾಲಿಗೆ ಸಹಕಾರ ನೀಡಬೇಕು.ಬೆಳಗ್ಗೆ ೯.೩೦ಕ್ಕೆ ಕಾರ್ಯಕ್ರಮ ಉದ್ಘಾಟನೆ, ೯.೪೫ಕ್ಕೆ ಸಿಎಂ ಭಾಷಣ, ೧೦ಕ್ಕೆ ಸಂವಿಧಾನ ಪೀಠಿಕೆ ಭೋದನೆ ಹಾಗೂ ಮಾನವ ಸರಪಳಿ ರೂಪಿಸುವುದು, ೧೦.೧೫ಕ್ಕೆ ಗಿಡ ನೆಡುವ ಕಾರ್ಯ ನಡೆಯಲಿದೆ. ಫರಂಗಿಪೇಟೆಯಿಂದ ಬ್ರಹ್ಮರಕೂಟ್ಲುವರೆಗೆ ಗಿಡ ನೆಡುವುದಕ್ಕೆ ಈಗಾಗಲೇ ಸ್ಥಳೀಯ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬ್ಯಾಂಕ್ ಸಿಬಂದಿ, ಅಧಿಕಾರಿಗಳು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಹಶೀಲ್ದಾರ್ ಲೀಡ್ ಬ್ಯಾಂಕ್ ಅಧಿಕಾರಿಗೆ ಸೂಚನೆ ನೀಡಿದರು.

ಜಾಹೀರಾತು

ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ನೇತೃತ್ವದಲ್ಲಿ ಸಭೆ ನಡೆಯಿತು.

ಸರಕಾರದ ಆದೇಶದಂತೆ ಪ್ರತಿ ೧೦೦ ಮೀ.ಗೆ ಒಬ್ಬ ಸೆಕ್ಷನ್ ಅಧಿಕಾರಿ, ೧ ಕಿ.ಮೀ.ಗೆ ತಾಲೂಕು ಮಟ್ಟದ ಅಧಿಕಾರಿ ಹಾಗೂ ೫ ಕಿ.ಮೀ.ಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನಿಯೋಜಿಸಬೇಕಿದೆ. ಜತೆಗೆ ತಾಲೂಕು ಮಟ್ಟದ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು. ಪ್ರತಿಯೊಬ್ಬ ಸರಕಾರಿ ಅಧಿಕಾರಿ, ನೌಕರ ಸಕ್ರೀಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದ್ದು, ಪ್ರತಿಯೊಬ್ಬ ನಾಗರಿಕ, ಕಾಲೇಜು ವಿದ್ಯಾರ್ಥಿ, ಸಂಘ ಸಂಸ್ಥೆಗಳನ್ನು ಸಕ್ರೀಯಗೊಳಿಸಿ ಆಯಾಯ ಭಾಗದಲ್ಲಿ ಮಾನವ ಸರಪಳಿಯಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ತಹಶೀಲ್ದಾರ್ ಸೂಚನೆ ನೀಡಿದರು.

ಸಭೆಯಲ್ಲಿ ಬಂಟ್ವಾಳ ಪುರಸಭಾಧ್ಯಕ್ಷ ವಾಸು ಪೂಜಾರಿ ಲೊರೆಟ್ಟೋ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುನೀತಾ, ಕಂದಾಯ ನಿರೀಕ್ಷಕರಾದ ಜನಾರ್ದನ್ ಜೆ, ವಿಜಯ್ ಆರ್, ಪುರಸಭಾ ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts