ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಗೆ ಅಧೀಕಾರೇತರ ಸದಸ್ಯರನ್ನು ನೇಮಿಸಲಾಗಿದೆ.
ಸಾಮಾನ್ಯ ಮೀಸಲಾತಿಯಲ್ಲಿ ನರಿಕೊಂಬು ಗ್ರಾಮದ ಬೋಳಂತೂರಿನ ರವೀಂದ್ರ ಸಪಲ್ಯ, ಬಂಟ್ವಾಳ ತಾಲೂಕು ಕಾವಳಪಡೂರು ವಗ್ಗ ನಿವಾಸಿ ಜೋಸೆಫ್ ಪ್ರವೀಣ್ ರೊಡ್ರಿಗಸ್, ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಮಹಮ್ಮದ್ ರಿಯಾಜ್, ಬಂಟ್ವಾಳ ತಾಲೂಕು ಕಸಬ ಗ್ರಾಮದ ವೆಂಕಪ್ಪ ಪೂಜಾರಿ, ಪರಿಶಿಷ್ಟ ಜಾತಿಯ ಮೀಸಲಾತಿಯಲ್ಲಿ ಬಂಟ್ವಾಳ ತಾಲೂಕು ಬಿ.ಕಸ್ಬ ಗ್ರಾಮದ ಅಶೋಕ್, ಮಹಿಳಾ ಮೀಸಲಾತಿಯಲ್ಲಿ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ರೇಶ್ಮ ತೇಲೀಸ್, ಹಿಂದುಳಿದ ವರ್ಗ ಮೀಸಲಾತಿಯಲ್ಲಿ ಬಿ.ಕಸ್ಬ ಗ್ರಾಮದ ಮಂಡಾಡಿ ಪುರುಷೋತ್ತಮ ಬಂಗೇರ, ಹಾಗೂ ಪರಿಶಿಷ್ಟ ಪಂಗಡ ಮೀಸಲಾತಿಯಲ್ಲಿ ಕೊಳ್ನಾಡು ಗ್ರಾಮದ ಕಡಮಜೆ ಕೊಡಿ ಶಿವಾನಂದ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಸರಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ"