ಬ್ಯಾಂಕಿನಿಂದ ಹಣ ಡ್ರಾ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಕಳವು

ನಿವೃತ್ತ ಸೈನಿಕ ,ಹಿರಿಯ ನಾಗರಿಕರೋರ್ವರು ಬಿ.ಸಿ.ರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕೆಲ ಹೊತ್ತಿನಲ್ಲೇ ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ನ್ನು ಬ್ಯಾಂಕಿನೊಳಗಿಂದಲೇ ಕಳವುಗೈದ ಮಾಡಿದ ಕುರಿತು ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳದ ಅಂಬ್ರೋಸ್ ಡಿ‌ಸೋಜ ಬ್ಯಾಗ್, ಬಿಸಿರೋಡಿನ‌ಲ್ಲಿರುವ ಸ್ಟೇಟ್ ಬ್ಯಾಂಕ್ ನ ಒಳಗಿನಿಂದ ಕಳವಾಗಿದೆ. ಒಟ್ಟು  ರೂ.1,30,000 ನಗದು ಕಳವಾಗಿದೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ. ಸೆ.4ರಂದು ಘಟನೆ ನಡೆದಿದ್ದು, ಇದೀಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ ಹೀಗಿದೆ:

ಅಂಬ್ರೋಸ್ ಅವರು ನಿವೃತ್ತ ಸೈನಿಕರಾಗಿದ್ದು, ಪೆನ್ಸನ್ ಹಣವನ್ನು ಮೂರು ಅಥವಾ ನಾಲ್ಕು ತಿಂಗಳಿಗೊಮ್ಮೆ ತಮ್ಮ ಖಾತೆಯಿಂದ ‌ಡ್ರಾ ಮಾಡುತ್ತಿದ್ದರು. ಸಮುದಾಯದ ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ಸೆ.4 ರಂದು ಒಟ್ಟು 50 ಸಾವಿರ ಹಣವನ್ನು ಬ್ಯಾಗ್ ಒಂದರಲ್ಲಿ ಇರಿಸಿಕೊಂಡು ಬಿಸಿರೋಡಿನ ಎಸ್.ಬಿ.ಐಗೆ ಬಂದಿದ್ದರು. ಇಲ್ಲಿನ ಇವರ ಖಾತೆಯಿಂದ 80 ಸಾವಿರ ಹಣವನ್ನು ಡ್ರಾ ಮಾಡಿ, ಒಟ್ಟು 1,30,000 ಹಣವನ್ನು ಒಂದೇ ಬ್ಯಾಗ್ ನಲ್ಲಿ ಹಾಕಿ ಬ್ಯಾಂಕ್ ನ ಟೇಬಲ್ ಮೇಲೆ ಇಟ್ಟು, ಪಾಸ್ ಬುಕ್ ಎಂಟ್ರಿ ಮಾಡಲು ಕೌಂಟರ್ ಬಳಿ ಹೋಗಿದ್ದರು. ಅಲ್ಲಿ ಎಂಟ್ರಿ ಮಾಡಿಸಿ ವಾಪಸು ಟೇಬಲ್ ಕಡೆ ಬಂದಾಗ ಬ್ಯಾಗ್ ಅಲ್ಲಿರದೆ ಕಾಣೆಯಾಗಿತ್ತು. ಇದೀಗ ಪಾಸ್ ಬುಕ್ ಹಾಗೂ ದಾಖಲೆಗಳಿದ್ದ ಕಳವಾದ ಬ್ಯಾಗ್ ಬಿಸಿರೋಡು ಕೈಕುಂಜೆ ರಸ್ತೆಯಲ್ಲಿ ಸಿಕ್ಕಿದೆ. ಕಳವು ಆಗಿರುವ ಹಣವನ್ನು ಮತ್ತು ಕಳವು ಮಾಡಿದ ಕಳ್ಳರನ್ನು ಪತ್ತೆ ಮಾಡಿಕೊಡಿ ಎಂದು ಅಂಬ್ರೋಸ್ ಅವರು ನಗರ ಪೋಲೀಸ್ ಠಾಣೆಗೆ ತಡವಾಗಿ ದೂರು ನೀಡಿದ್ದಾರೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬ್ಯಾಂಕಿನಿಂದ ಹಣ ಡ್ರಾ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಕಳವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*