ಬಂಟ್ವಾಳ ತಾಲೂಕಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ನಿರ್ಮಾಣ

ರಾಜ್ಯ ಸರ್ಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾನುವಾರ ಫರಂಗಿಪೇಟೆಯಿಂದ ಮಿತ್ತೂರು, ಕಬಕದ ವರೆಗೆ ಮಾನವ ಸರಪಳಿಯನ್ನು ರೂಪಿಸಲಾಯಿತು.

ಆರಂಭದಲ್ಲಿ ನಾಡಗೀತೆ ಹಾಡಿ, ಬಳಿಕ ಪ್ರಮುಖರಿಂದ ಸಂದೇಶ ನೀಡಿದ ಬಳಿಕ ಸಂವಿಧಾನದ ಪ್ರಸ್ತಾವನೆಯನ್ನು ಓದಲಾಯಿತು. ಬಳಿಕ ಎಲ್ಲರೂ ಪರಸ್ಪರ ಕೈಕೈ ಹಿಡಿದುಕೊಂಡು ಸರಪಳಿಯನ್ನು ನಿರ್ಮಿಸಿದರು.

ಮಾನವ ಸರಪಳಿ ನಿರ್ಮಾಣ

ಬಿ.ಸಿ.ರೋಡ್ ಫ್ಲೈಓವರ್ ಕೆಳಗೆ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ಸಂದೇಶ ನೀಡಿ, ಪ್ರಜಾಪ್ರಭುತ್ವ ರಕ್ಷಣೆ ಹಾಗೂ ಅದರ ಅರಿವು ಪಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಈ ಸಂದರ್ಭ ಬುಡಾ ಅಧ್ಯಕ್ಷ ಬೇಬಿ ಕುಂದರ್ ಅವರು ಹಾಗೂ ಸಾರ್ವಜನಿಕರ ಪರವಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು.

ಕಲ್ಲಡ್ಕದಲ್ಲಿ

ಪ್ರತಿಜ್ಞೆ ಸ್ವೀಕಾರ

ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಸಮಾಜ ಕಲ್ಯಾಣ ಇಲಾಖಾಧಿಕಾರಿ ಜಯಶ್ರೀ ಸಹಿತ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭ ಸ್ಥಳೀಯ ಸ್ವಯಂಸೇವಾ ಸಂಘಟನೆಗಳು, ನಾನಾ ಸಂಘಟನೆಗಳ ಪ್ರಮುಖರು, ಸರಕಾರಿ ನೌಕರರ ಸಂಘ, ಸಾರ್ವಜನಿಕ ಸಂಘಟನೆಗಳು, ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ನಿರತರ ಸಹಿತ ಹಲವು ಮಂದಿ ಉಪಸ್ಥಿತರಿದ್ದು, ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭ ಬ್ಯಾನರ್, ಫಲಕಗಳನ್ನು ಪ್ರದರ್ಶಿಸಲಾಯಿತು.

ಬಿ.ಸಿ.ರೋಡಿನಲ್ಲಿ ಸೇರಿದ ಜನರು

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ತಾಲೂಕಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ನಿರ್ಮಾಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*