ಹಿಂದು ಸಂಘಟನೆಗಳಿಂದ ಬಿ.ಸಿ.ರೋಡ್ ಚಲೋ – ಸವಾಲು ಸ್ವೀಕರಿಸಿ ಬಂದಿದ್ದೇನೆ: ಶರಣ್ ಪಂಪ್ ವೆಲ್

ಬಂಟ್ವಾಳ: ಹಿಂದು ಸಂಘಟನೆಗಳು  ಸೋಮವಾರ ಬಿ.ಸಿ.ರೋಡ್ ಚಲೋ  ಹಮ್ಮಿಕೊಂಡಿದ್ದು, ಅಲ್ಲಿಗೆ  ಶರಣ್ ಪಂಪ್ ವೆಲ್ ಆಗಮಿಸಿದರು.  ಬಳಿಕ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸವಾಲು ಹೊಸದಲ್ಲ, ಇದನ್ನು ಸ್ವೀಕರಿಸಿ ಬಂದಿದ್ದೇನೆ, ಇಂಥ ಸವಾಲುಗಳನ್ನು ಇನ್ನಷ್ಟು ಬಂದರೆ ಎದುರಿಸಲು ಹಿಂದು ಸಮಾಜ ಸಜ್ಜಾಗಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಬಿ.ಸಿ.ರೋಡ್

ಬಿ.ಸಿ.ರೋಡ್

ಬಿ.ಸಿ.ರೋಡ್

ಇದಕ್ಕೂ ಮುನ್ನ ಬೆಳಗ್ಗಿನಿಂದಲೇ ರಕ್ತೇಶ್ವರಿ ದೇವಸ್ಥಾನ ಮುಂಭಾಗ ಸೇರಿದ್ದ ಹಿಂದು ಸಂಘಟನೆಗಳ ಕಾರ್ಯಕರ್ತರು, ಶರಣ್ ಪಂಪ್ ವೆಲ್ ಆಗಮಿಸಿದ ನಂತರ, ಜೈಕಾರ ಘೋಷಣೆ ಕೂಗುತ್ತಾ,  ಪೋಲೀಸರ ತಡೆಯನ್ನು ಲೆಕ್ಕಿಸದೆ ಮುಂದೆ ಸಾಗಿ, ಆಕ್ರೋಶ ವ್ಯಕ್ತಪಡಿಸಿದರು. ಇದಾದ ಬಳಿಕ ಶರಣ್, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಶರಣ್ ಪಂಪ್ ವೆಲ್

ಪ್ರಮುಖರಾದ ಪುನೀತ್ ಅತ್ತಾವರ, ಪ್ರಸಾದ್ ಕುಮಾರ್ ರೈ, ವಿಕಾಸ್ ಪುತ್ತೂರು, ಸಂದೇಶ್ ಶೆಟ್ಟಿ, ಭಾಸ್ಕರ ಧರ್ಮಸ್ಥಳ, ನವೀನ್ ನೆರಿಯ, ನರಸಿಂಹ ಮಾಣಿ, ಮಹೇಶ್ ಬೈಲೂರು, ಪ್ರಶಾಂತ್ ಕೆಂಪುಗುಡ್ಡೆ, ಸಮೀತ್ ರಾಜ್ ಧರೆಗುಡ್ಡೆ, ತಿರುಲೇಶ್ ಬೆಳ್ಳೂರು, ಗುರುರಾಜ ಬಂಟ್ವಾಳ, ಆರ್. ಚೆನ್ನಪ್ಪ ಕೋಟ್ಯಾನ್, ದಿನೇಶ್ ಅಮ್ಟೂರು, ಗೋವಿಂದ ಪ್ರಭು, ಪುರುಷೋತ್ತಮ ಶೆಟ್ಟಿ, ಪುರುಷೋತ್ತಮ ಸಾಲಿಯಾನ್ ಸಹಿತ ಹಿಂದು ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಪೊಲೀಸ್ ಐಜಿಪಿ ಅಮಿತ್ ಸಿಂಗ್,ಎಸ್.ಪಿ.ಯತೀಶ್ ಎನ್, ಅಡಿಶನಲ್ ಎಸ್ಪಿ ರಾಜೇಂದ್ರ ಡಿ.ಎಸ್, ಡಿವೈಎಸ್ಪಿ ವಿಜಯ ಪ್ರಸಾದ್,.ಸಹಾಯಕ ಕಮೀಷನರ್ ಹರ್ಷವರ್ದನ್,ತಹಸೀಲ್ದಾರ್ ಅರ್ಚನಾ ಭಟ್ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಹಿಂದು ಸಂಘಟನೆಗಳಿಂದ ಬಿ.ಸಿ.ರೋಡ್ ಚಲೋ – ಸವಾಲು ಸ್ವೀಕರಿಸಿ ಬಂದಿದ್ದೇನೆ: ಶರಣ್ ಪಂಪ್ ವೆಲ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*