ಸೇವಾಚಟುವಟಿಕೆಗಳಿಗೆ ಅಭಿನಂದನೆ: ಭೂಮಾಪನ ಇಲಾಖೆಯ ದಕ್ಷಿಣ ಕನ್ನಡದ ಇಬ್ಬರಿಗೆ ಅವಕಾಶ

ನಿಶಾಂತ್

ಪುಟ್ಟೇಗೌಡ

ದಕ್ಷಿಣ ಕನ್ನಡ ಜಿಲ್ಲೆಯ ಭೂಮಾಪನ ಇಲಾಖೆಯ ಇಬ್ಬರಿಗೆ ಶುಕ್ರವಾರ (ಸೆ.27) ಬೆಳಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧ್ಯಕ್ಷತೆಯಲ್ಲಿ ವಿಕಾಸ ಸೌಧದಲ್ಲಿ ನಡೆಯುವ ಅಭಿನಂದನಾ ಸಭೆಯಲ್ಲಿ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುತ್ತದೆ.

ಸರಕಾರಿ ಭೂಮಾಪಕರ ಪೈಕಿ ರಾಜ್ಯದ 31 ಮಂದಿಗೆ ಈ ಗೌರವ ಲಭಿಸಿದ್ದು, ಅವರಲ್ಲಿ ಬಂಟ್ವಾಳದ ನಿಶಾಂತ್ ಅವರಿಗೆ ಅವಕಾಶ ದೊರಕಿದೆ. ಅಂತೆಯೇ ಪರವಾನಗಿ ಭೂಮಾಪಕರ ಪೈಕಿ 33 ಮಂದಿಗೆ ಗೌರವ ಲಭಿಸಿದ್ದು, ಅವರಲ್ಲಿ ದಕ್ಷಿಣ ಕನ್ನಡದ ಮಂಗಳೂರಿನ ಪುಟ್ಟೇಗೌಡ ಕೆ.ಎಂ. ಸೇರಿದ್ದಾರೆ. ಇಲಾಖೆಯಲ್ಲಿ ಚಾಲ್ತಿಯಲ್ಲಿರುವ ಚಟುವಟಿಕೆಗಳ ಪೈಕಿ, ಮೋಜಿಣಿ ತಂತ್ರಾಂಶದಲ್ಲಿ ವಿಲೇಯಾದ ಪ್ರಗತಿ, ಆಕಾರಬಂದ್ ಗಣಕೀಕರಣ, ದಾಖಲೆಗಳ ಪುನರ್ ನಿರ್ಮಾಣ, ಕೆರೆ ರಾಜಾಕಾಲುವೆ, ಅರಣ್ಯ ಜಮೀನು ಸಹಿತ ಸರಕಾರಿ ಜಮೀನು ಅಳತೆ ಕೆಲಸ, ಆರ್ ಸಿ ಸಿ ಎಂ ಎಸ್ ಪ್ರಗತಿ ಇವುಗಳ ಬಗ್ಗೆ ಸಾಧಿಸಿರುವ ಪ್ರಗತಿಯನ್ನು ಮಾನದಂಡವಾಗಿರಿಸಿ ಇವರನ್ನು ಸರಕಾರ ವತಿಯಿಂದ ಅಭಿನಂದಿಸಲಿದೆ ಎಂದು ಇಲಾಖಾ ಪ್ರಕಟಣೆ ತಿಳಿಸಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸೇವಾಚಟುವಟಿಕೆಗಳಿಗೆ ಅಭಿನಂದನೆ: ಭೂಮಾಪನ ಇಲಾಖೆಯ ದಕ್ಷಿಣ ಕನ್ನಡದ ಇಬ್ಬರಿಗೆ ಅವಕಾಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*