ಬಂಟ್ವಾಳ

ಬಂಟ್ವಾಳದಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆ

ಮಹಾತ್ಮರ ಆದರ್ಶ ಪಾಲನೆ ಮೂಲಕ ಅವರ ಸದ್ವಿಚಾರವನ್ನು ಮೈಗೂಡಿಸಿಕೊಳ್ಳುವುದು ಜಯಂತಿ ಆಚರಣೆ ಮಾಡುವ ಉದ್ದೇಶವಾಗಿದೆ ಎಂದು ಬಂಟ್ವಾಳ ತಹಸೀಲ್ದಾರ್ ಡಿ.ಅರ್ಚನಾ ಭಟ್ ಹೇಳಿದರು.

..

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವವರು ಮಹಾತ್ಮಾ ಗಾಂಧೀಜಿಯವರ ಆದರ್ಶ ಹಾಗೂ ಅವರು ಹಾಕಿಕೊಟ್ಟ ಹಾದಿಯಲ್ಲಿ ಮುನ್ನಡೆಯುವ ಅಗತ್ಯವಿದೆ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಂದಿಯಾ ನಾಯಕ ಮಾತನಾಡಿ, ಅಹಿಂಸಾ ಮಾರ್ಗದಲ್ಲಿ ಹೋರಾಡಿದ ಮಹಾತ್ಮಾ ಗಾಂಧೀಜಿ, ಸರಳ ಉಡುಪಿನಲ್ಲಿ ಜೀವನಪೂರ್ತಿ ಬದುಕುವ ಮೂಲಕ ಮಾರ್ಗದರ್ಶಿಯಾದವರು ಎಂದರು.

ಈ ಸಂದರ್ಭ ಉಪತಹಸೀಲ್ದಾರ್ ಗಳಾದ ರಾಜೇಶ್ ನಾಯ್ಕ್, ದಿವಾಕರ ಮುಗುಳ್ಯ, ನರೇಂದ್ರನಾಥ ಮಿತ್ತೂರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುನೀತಾ ಸಹಿತ ನಾನಾ ಇಲಾಖೆಗಳ ಅಧಿಕಾರಿಗಳು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷುಕುಮಾರ್ ಸಹಿತ ಸಿಬಂದಿ ಹಾಜರಿದ್ದರು. ಇದಕ್ಕೂ ಮುನ್ನ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts

ಹಿರಿಯ ನಾಗರಿಕ ದಿನಾಚರಣೆಯಂದೇ ಧರಣಿ ಕುಳಿತ ನಿವೃತ್ತ ಸರಕಾರಿ ನೌಕರರು…. ಕಾರಣವೇನು?

ಸಾಲ ಕೇಳ್ತಾ ಇಲ್ಲ.. ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ ಎಂದು ಘೋಷಣೆ ಕೂಗಿದರು (more…)

4 days ago