ಬಂಟ್ವಾಳ

ಸಜೀಪಮೂಡ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

ಸಜೀಪಮೂಡ ಸರಕಾರಿ ಪ್ರೌಢಶಾಲೆಯಲ್ಲಿ, ಚಿತ್ರಕಲಾ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಸಂಯೋಜನೆಯಲ್ಲಿ 3 ದಿನಗಳ ಚಿಗುರು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ ಸಂಪನ್ನಗೊಂಡಿತು.

ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರಿನ ಅಧ್ಯಕ್ಷ  ಯೋಗೀಶ್ ಆಳ್ವ ಶಿಬಿರ ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಉಪಪ್ರಾಂಶುಪಾಲೆ  ಜಯಲಕ್ಷ್ಮೀ ಪಿ.ಎನ್, ಲಯನ್ಸ್  ಕ್ಲಬ್ ಕೊಳ್ನಾಡು ಸಾಲೆತ್ತೂರಿನ ಕಾರ್ಯದರ್ಶಿ ರಾಮಪ್ರಸಾದ್ ರೈ ತಿರುವಾಜೆ, ಖಜಾಂಚಿ ಚಿತ್ತರಂಜನ್ ಕೆ.ಆರ್., ಪತ್ರಕರ್ತ ಮೌನೇಶ್ ವಿಶ್ವಕರ್ಮ, ಎಸ್‌ಡಿಎಂಸಿ ಸದಸ್ಯ ದಿನಕರ್  ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ವಿಶ್ವನಾಥ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು, ಸಾಮಾಜಿಕ ಮುಂದಾಳು ಪ್ರಭಾಕರ ಶೆಟ್ಟಿ ಪೆರ್ವ, ಸಜೀಪ ಮೂಡ ಗ್ರಾ.ಪಂ.ಸದಸ್ಯ ವಿಶ್ವನಾಥ ಬೆಳ್ಚಾಡ, ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್ ಉಪಸ್ಥಿತರಿದ್ದರು. ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಮೌನೇಶ್ ವಿಶ್ವಕರ್ಮ,  ಮುರಳೀಕೃಷ್ಣ ರಾವ್, ಸಂದೀಪ್ ಸಾಲ್ಯಾನ್, ಅರವಿಂದ ಕುಡ್ಲ, ಪ್ರೇಮನಾಥ ಮರ್ಣೆ ಭಾಗವಹಿಸಿದ್ದರು. ಉಪಪ್ರಾಂಶುಪಾಲ ಗಣೇಶ್ ಸ್ವಾಗತಿಸಿದರು, ಶಿಬಿರದ ಸಂಯೋಜಕ ಬಾಲಕೃಷ್ಣ ಶೆಟ್ಟಿ ವಂದಿಸಿದರು. ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ