ಬಂಟ್ವಾಳ

ಸಿದ್ಧರಾಮಯ್ಯ ಸರಕಾರ ಸುಭದ್ರ – ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಬಂಟ್ವಾಳದಲ್ಲಿ ಸಚಿವ ದಿನೇಶ್ ಗುಂಡೂರಾವ್

ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸುಭದ್ರವಾಗಿದ್ದು, ಅವಧಿಪೂರ್ತಿ ಮಾಡುತ್ತದೆ, ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ ವಿಧಾನಪರಿಷತ್ ಚುನಾವಣೆಯಲ್ಲದೆ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯೂ ಇದ್ದು, ಮುಂದಿನ ಸಾಲಿನ ವಿಧಾನಸಭೆ ಚುನಾವಣೆವರೆಗೂ ಕಾರ್ಯಕರ್ತರು ಪಕ್ಷವನ್ನು ಗೆಲ್ಲಿಸಲು ಶ್ರಮ ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚುನಾಯಿತ ಪ್ರತಿನಿಧಿಗಳ ಮತ್ತು ಕಾರ್ಯಕರ್ತರ ಸಭೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಶುಕ್ರವಾರ ಸಂಜೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ದಿನೇಶ್, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಸರಕಾರ ಸುಭದ್ರವಾಗಿದೆ, ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಮತ್ತೆ ಗೆಲುವಿನ ನಗೆ ಬೀರಬೇಕಿದೆ. ರಾಜು ಪೂಜಾರಿ ಅವರು ಪಕ್ಷ ಹೆಮ್ಮೆ ಪಡುವ ಅಭ್ಯರ್ಥಿ, ಜನರ ಹತ್ತಿರ ಇರುವ ವ್ಯಕ್ತಿಯಾಗಿದ್ದಾರೆ ಉದಾಸೀನ ಮಾಡದೆ, ಎಲ್ಲರೂ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.

ಅಧ್ಯಕ್ಷತೆಯನ್ನು ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಹಿಸಿದ್ದರು. ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ, ಈ ಬಾರಿ ತನ್ನನ್ನು ಆಯ್ಕೆ ಮಾಡುವ ಮೂಲಕ ಪಕ್ಷವನ್ನು ಬಲಗೊಳಿಸಲು ಕರೆ ನೀಡಿದರು.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಪಕ್ಷದ ಋಣ ತೀರಿಸುವ ಕಾರ್ಯ ಮಾಡಬೇಕು. ಬಿಜೆಪಿ ಸೋಲು ಕಾಣಬೇಕಾಗಿರುವುದೇ ನಮ್ಮ ಟಾರ್ಗೆಟ್ ಎಂದರು. ವಿಧಾನಪರಿಷತ್ತು ಸದಸ್ಯ‌, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ.ಮಂಜುನಾಥ ಭಂಡಾರಿ ಮಾತನಾಡಿ ರಾಜು ಪೂಜಾರಿ ಅವರ ಪಕ್ಷನಿಷ್ಠೆ ಕುರಿತು ವಿವರಿಸಿದರು.ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವಾ, ಪಕ್ಷ ಪ್ರಮುಖರಾದ ಅಶ್ವನಿ ಕುಮಾರ್ ರೈ, ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್ ರೋಡ್ರಿಗಸ್, ಅಬ್ಬಾಸ್ ಆಲಿ, ಪದ್ಮನಾಭ ರೈ, ಸುಭಾಶ್ಚಂದ್ರ ಶೆಟ್ಟಿ, ಪದ್ಮಶೇಖರ ಜೈನ್, ಎಂ.ಎಸ್.ಮಹಮ್ಮದ್, ಮಾಯಿಲಪ್ಪ ಸಾಲಿಯಾನ್, ಅಶ್ವನಿ ಕುಮಾರ್ ರೈ, ಸುದೀಪ್ ಕುಮಾರ್ ಶೆಟ್ಟಿ, ಪುರಸಭಾಧ್ಯಕ್ಷ ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್ ಉಪಸ್ಥಿತರಿದ್ದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಸ್ವಾಗತಿಸಿದರು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.