ಜಿಲ್ಲಾ ಸುದ್ದಿ

ಬೆಳೆ ಸಮೀಕ್ಷೆ ಗಡುವು ವಿಸ್ತರಣೆ ಯಾಕೆ ಮಾಡಬೇಕು? ಸಿದ್ಧಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು ಹೇಳುವುದು ಹೀಗೆ

ಬೆಳೆ ಸಮೀಕ್ಷೆ ಗಡುವನ್ನು ವಿಸ್ತರಿಸಬೇಕು ಎಂದು ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಪ್ರಭಾಕರ ಪ್ರಭು ಮನವಿ ಮಾಡಿದ್ದಾರೆ.

ಜಾಹೀರಾತು

ರೈತರು ತಮ್ಮ ಕೃಷಿ ಜಮೀನನಲ್ಲಿ ಬೆಳೆಯುವ ಬೆಳೆಗಳ ಸಮೀಕ್ಷೆಯನ್ನು ಕಡ್ಡಾಯವಾಗಿ  ಮಾಡಬೇಕು.  ಈ ಮೂಲಕ ರೈತರಿಗೆ ಸಿಗುವ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ, ಫಸಲ್ ಭೀಮಾ ಯೋಜನೆ , ಬೆಳೆಸಾಲ ,ಬೆಳೆ ನಷ್ಟ ,ಇತ್ಯಾದಿ ಯೋಜನೆಗಳ ಪ್ರಯೋಜನಗಳು ಬೆಳೆ ಸಮೀಕ್ಷೆ ಮಾಡಿದ್ದಲ್ಲಿ ಮಾತ್ರ ಸಂಬಂಧ ಪಟ್ಟ ರೈತರಿಗೆ ದೊರಕುತ್ತದೆ . ಈ ಬಗ್ಗೆ ಆಸಕ್ತಿಯ ಕೆಲವೇ ಕೆಲವು ರೈತರು ಮಾತ್ರ ತಮ್ಮ ಜಮೀನಿನಲ್ಲಿ ಬೆಳೆಯುವ ಬೆಳೆಯನ್ನು ಸಮೀಕ್ಷೆ ಮಾಡಿರುತ್ತಾರೆ. ಇನ್ನುಳಿದ  ಸಮೀಕ್ಷೆ ಮಾಡಲು ಗೊತ್ತಾಗದ, ಸರ್ವರ್ ಸಮಸ್ಯೆ, ಇನ್ನಿತರ ಸಮಸ್ಯೆಗಳಿಂದ ರೈತರು ತಮ್ಮ ಬೆಳೆ ಸಮೀಕ್ಷೆಗಾಗಿ ಕಂದಾಯ ಇಲಾಖೆಯ ಖಾಸಗಿ ಬೆಳೆ ಸಮೀಕ್ಷೆದಾರರನ್ನು ಅವಲಂಬಿತರಾಗುವ ಅನಿವಾರ್ಯ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ಅವರು ಹೇಳಿದ್ದಾರೆ.

ಸರಕಾರದ ಕಂದಾಯ ಇಲಾಖೆ ವತಿಯಿಂದ ಪ್ರತಿ ಗ್ರಾಮಗಳಿಗೆ ಒಬ್ಬರಂತೆ ಖಾಸಗಿ ಬೆಳೆ ಸಮೀಕ್ಷೆದಾರರನ್ನು ನೇಮಕ ಮಾಡಲಾಗಿದ್ದು . ಈ ರೀತಿಯಾಗಿ ನೇಮಕ ಮಾಡಲಾದ ಖಾಸಗಿ ಬೆಳೆ ಸಮೀಕ್ಷೆದಾರರು ದಿನವೊಂದಕ್ಕೆ ಕೇವಲ 40-50 ಪ್ಲಾಟ್ ಸಮೀಕ್ಷೆ ಮಾಡುತ್ತಿರುವುದಾಗಿದ್ದು ಅಷ್ಟೇನೂ ಪ್ರಗತಿ ಸಾಧ್ಯವಾಗುತ್ತಿಲ್ಲ. ಅಂದರೆ ಖಾಸಗಿ ಬೆಳೆಸಮೀಕ್ಷೆದಾರರಿಗೆ ಪ್ಲಾಟ್ ಗೆ 10ರೂ ರಂತೆ ,ನೀಡುವ ದರ ತೀರಾ ಕಡಿಮೆ ಇರುವುದರಿಂದ ಹಾಗೂ ಪ್ರತಿ ಪ್ಲಾಟ್ ಗಳಿಗೆ ಹೋಗಿಯೇ ಸಮೀಕ್ಷೆ ಮಾಡಬೇಕಾಗಿರುವುದರಿಂದ ಖಾಸಗಿ ಬೆಳೆ ಸಮೀಕ್ಷೆದಾರರು ಹೆಚ್ಚಿನ ಆಸಕ್ತಿ ವಹಿಸುತ್ತಿಲ್ಲ.ಇದರಿಂದ ಬೆಳೆ ಸಮೀಕ್ಷೆ ಪ್ರಗತಿ  ಕೆಲವು ಗ್ರಾಮಗಳಲ್ಲಿ ಶೇ 25ರಷ್ಟು ಆಗಿರುವುದಿಲ್ಲ. ಇದರಿಂದ ಬೆಳೆ ಸಮೀಕ್ಷೆ  ಮಾಡದ ರೈತರು ಸಮೀಕ್ಷೆಗಾಗಿ ಪರದಾಡುತ್ತಿದ್ದಾರೆ ಎಂದವರು ಗಮನ ಸೆಳೆದಿದ್ದಾರೆ.

ಈ ಗೊಂದಲದ ಅಸಂಬದ್ಧ ಆದೇಶದಿಂದಾಗಿ ರೈತರ ಬೆಳೆ ಸಮೀಕ್ಷೆ ಪರಿಪೂರ್ಣ ವಾಗದೆ ಬಹುತೇಕ ರೈತರು ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯುವಲ್ಲಿ ವಂಚಿತರಾಗಿದ್ದಾರೆ ಎಂದು ಪ್ರಭು ಹೇಳಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts