ಮಂಗಳೂರಲ್ಲಿ ಹೈಕೋರ್ಟ್ ಪೀಠ -ಸ್ಥಾಪನೆಗೆ ತೀವ್ರ ಹೋರಾಟ ; ಬಂಟ್ವಾಳದಲ್ಲಿ ನಡೆದ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯಲ್ಲಿ ತೀರ್ಮಾನ

HIGH COURT BENCH AT MANGALURU ಕರಾವಳಿಯಲ್ಲಿ ಮಂಗಳೂರನ್ನು ಕೇಂದ್ರೀಕರಿಸಿಕೊಂಡು ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂಬ ಉದ್ದೇಶದಿಂದ ಆರಂಭಿಸಲಾದ ಹೋರಾಟವನ್ನು ತೀವ್ರಗೊಳಿಸಿ ಜನಾಂದೋಲನ ರೂಪಕ್ಕೆ ಕೊಂಡೊಯ್ಯಲು ಹೋರಾಟ ಸಮಿತಿ ನಿರ್ಧರಿಸಿದೆ. ಸಂಚಾಲಕ ಐವನ್ ಡಿಸೋಜ ನೇತೃತ್ವದಲ್ಲಿ ಬಂಟ್ವಾಳದ ನ್ಯಾಯಾಲಯ ಸಭಾಂಗಣದಲ್ಲಿ ಬಂಟ್ವಾಳ (BANTWAL BAR ASSOCIATION) ವಕೀಲರ ಸಂಘ ಆಯೋಜಿಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ವಕೀಲರ ಸಮಾಲೋಚನಾ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ತಾಲೂಕು ಮಟ್ಟದಲ್ಲಿ ಈ ಕುರಿತು ಜನಾಂದೋಲನ ರೂಪಿಸುವಂತೆ ಜಿಲ್ಲೆಯ ನಾನಾ ಕಡೆಗಳಿಂದ ಆಗಮಿಸಿದ್ದ ವಕೀಲರು ವಿಚಾರ ಮಂಡಿಸಿದರು. ಪೀಠ ಸ್ಥಾಪನೆಯಾಗುವವರೆಗೆ ವಿರಮಿಸದೆ ಬಂದ್ ಸಹಿತ ನಾನಾ ಸ್ವರೂಪದ ಹೋರಾಟವನ್ನು ಜನಸಮುದಾಯದ ಬೆಂಬಲದಿಂದ ರೂಪಿಸಲು ತೀರ್ಮಾನಿಸಲಾಯಿತು.

ಜಾಹೀರಾತು

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನ ಸಂಚಾಲಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ (IVAN DSOUZA, MLC) ಮಾತನಾಡಿ, ಸರಕಾರದ ಮಟ್ಟದಲ್ಲಿ ಈ ಕುರಿತು ಗಮನ ಸೆಳೆಯುವ ಕೆಲಸವಾಗುತ್ತಿದೆ. ಸ್ಪೀಕರ್ ಯು.ಟಿ.ಖಾದರ್ ಅವರ ನೇತೃತ್ವದಲ್ಲಿ ಮುಂದಿನ ಅವೇಶನಕ್ಕೆ ಮೊದಲು ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಿಗೆ ಸಂಬಂಸಿದ ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನಪರಿಷತ್ ಸದಸ್ಯರ ಸಭೆಯನ್ನು ಕರೆಯಲಾಗುವುದು ಎಂದರು.

ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಹೋರಾಟ ಸಮಿತಿ ಪ್ರಮುಖ ಮೋನಪ್ಪ ಭಂಡಾರಿ ಮಾತನಾಡಿ, ಆಡಳಿತಕ್ಕೆ ಚುರುಕು ಮುಟ್ಟಿಸುವ ಕೆಲಸವಾಗಬೇಕಾದರೆ, ಹೋರಾಟಕ್ಕೆ ಕಾವು ಬರಬೇಕು ಎಂದರು.

ಹಿರಿಯ ವಕೀಲರಾದ ಎಂ.ಪಿ.ನೊರೊನ್ಹ ಹೈಕೋರ್ಟ್ ಪೀಠದ ರೂಪುರೇಷೆ ಕುರಿತು ವಿವರಿಸಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ.ರಾಘವೇಂದ್ರ ಪ್ರಾಸ್ತಾವಿಕ ಮಾತನಾಡಿ, ಪೋಸ್ಟ್ಕಾರ್ಡ್ ಚಳವಳಿ, ಸಹಿ ಸಂಗ್ರಹ ಚಳವಳಿ ಮಾಡುವುದರ ಮೂಲಕ ಸಾರ್ವಜನಿಕರು ಸೇರಿಕೊಳ್ಳಬೇಕು ಎಂದು ಹೇಳಿದರು.

ಸುಳ್ಯ ವಕೀಲರ ಸಂಘದ ಅಧ್ಯಕ್ಷ ಸುಕುಮಾರ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ ಮತ್ತಿತರರು ವಿಚಾರ ಮಂಡಿಸಿದರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ತಾ ಸ್ವಾಗತಿಸಿದರು. ನ್ಯಾಯವಾದಿ ರವೀಂದ್ರ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು. ನ್ಯಾಯವಾದಿ ಬಿ.ವಿ.ಶೆಣೈ ವಂದಿಸಿದರು. ಈ ಸಂದರ್ಭ ಐವನ್ ಡಿಸೋಜ ಅವರನ್ನು ವಿಧಾನಪರಿಷತ್ ಸದಸ್ಯರಾಗಿ ಮೊದಲ ಬಾರಿ ಆಗಮಿಸಿದ ಹಿನ್ನೆಲೆ ಸನ್ಮಾನಿಸಲಾಯಿತು. ನ್ಯಾಯವಾದಿ ವೀರೇಂದ್ರ ಸಿದ್ಧಕಟ್ಟೆ ಸನ್ಮಾನಪತ್ರ ವಾಚಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಮಂಗಳೂರಲ್ಲಿ ಹೈಕೋರ್ಟ್ ಪೀಠ -ಸ್ಥಾಪನೆಗೆ ತೀವ್ರ ಹೋರಾಟ ; ಬಂಟ್ವಾಳದಲ್ಲಿ ನಡೆದ ಜಿಲ್ಲಾ ಮಟ್ಟದ ಸಮಾಲೋಚನಾ ಸಭೆಯಲ್ಲಿ ತೀರ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*