ಬಂಟ್ವಾಳ: ನವೆಂಬರ್ 19ರಂದು ಶಂಭೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ 18ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಬಾಲಬಂಧು ಪುರಸ್ಕಾರಕ್ಕೆ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆಯ ಸಹಶಿಕ್ಷಕಿ ಸುಧಾ ನಾಗೇಶ್ ಆಯ್ಕೆಗೊಂಡಿದ್ದಾರೆ. ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ ಬಾಯಾರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಕವನ ಸಂಕಲನ, ವಿದ್ಯಾರ್ಥಿ ಕೈಪಿಡಿ, ತುಳು ಕೃತಿ ರಚನೆ ಸಹಿತ ಹಲವು ಪುಸ್ತಕಗಳನ್ನು ಬರೆದಿರುವ ಅವರು, ಮಕ್ಕಳ ಸಂಘಟನೆಗೆ ದುಡಿದಿದ್ದಾರೆ. 576 ವಿದ್ಯಾರ್ಥಿಗಳಿಗೆ ಗೈಡ್ಸ್ ತರಬೇತಿ ನೀಡಿದ್ದು, 5 ಗೈಡ್ಸ್ ಗಳು ರಾಷ್ಟ್ರಪತಿ ಪುರಸ್ಕಾರವನ್ನು ,55 ಗೈಡ್ಸ್ ಗಳು ರಾಜ್ಯ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಅಲ್ಲದೆ 12 ಸ್ಕೌಟ್ಸ್ ಮತ್ತು 15,ಗೈಡ್ಸ್ ಗಳು ‘ವಿಶ್ವ ಸಾಂಸ್ಕೃತಿಕ ಜಾಂಬೂರಿಯಲ್ಲಿ ಭಾಗವಹಿಸಿದ್ದಾರೆ. 4 ಸ್ಕೌಟ್ ಮತ್ತು ಇಬ್ಬರು ಗೈಡ್ಸ್ ವಿಟ್ಲ ಸ್ಥಳೀಯ ಸಂಸ್ಥೆಯು ಹಮ್ಮಿಕೊಂಡಿದ್ದ ಜಿಲ್ಲಾ ಕ್ಯಾಂಪೊರಿಯಲ್ಲಿ ಭಾಗವಹಿಸಿದ್ದಾರೆ ಎಂದವರು ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…