ಪ್ರಮುಖ ಸುದ್ದಿಗಳು

ಕನ್ನಡ ಕಟ್ಟುವ ಕಾರ್ಯದಲ್ಲಿ ಗಡಿನಾಡ ಕೊಡುಗೆ ಪ್ರಮುಖ: ಚೇತನ್ ಮುಂಡಾಜೆ

ಕನ್ನಡವನ್ನು ಕಟ್ಟುವ ಹತ್ಯಾರಗಳು ಗಡಿನಾಡಿನಿಂದಲೇ ಹೆಚ್ಚಾಗಿ ಬಂದಿವೆ. ಇದಕ್ಕೆ ಇಲ್ಲಿಯ ಸಂದಿಗ್ಧತೆಗಳು ಕಾರಣ ಎಂದು ಸಹಾಯಕ ಪ್ರಾಧ್ಯಾಪಕ ಚೇತನ್ ಮುಂಡಾಜೆ ಅಭಿಪ್ರಾಯ ಪಟ್ಟರು. ಇಲ್ಲಿಯ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಭಾಷಾವಾಚಿಯಾಗಿಯೂ ಪ್ರದೇಶವಾಚಿಯಾಗಿಯೂ ಕನ್ನಡವನ್ನು ನಾವು ಗುರುತಿಸಬಹುದು. ಕರ್ನಾಟಕದ ಹೊರಗಿದ್ದು ಕನ್ನಡ ರಾಜ್ಯೋತ್ಸವ ಆಚರಿಸುವುದು ಬಹಳ ಪ್ರಾಮುಖ್ಯತೆ ಹೊಂದಿದೆ ಎಂದು ನುಡಿದರು.

ಜಾಹೀರಾತು

ಗಡಿನಾಡನಲ್ಲಿದ್ದರೂ, ಹೊರರಾಜ್ಯದಲ್ಲಿದ್ದರೂ ಕನ್ನಡದ ಅಸ್ಮಿತೆಯನ್ನು ಕಾಪಾಡಿಕೊಳ್ಳಬೇಕು. ಭಾರತಾಂತರ್ಗತ ಕರ್ನಾಟಕ ಅನ್ನುವ ದೃಷ್ಟಿ ನಾಡಗೀತೆಯಲ್ಲಿ ಇದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ವಿಭಾಗದ ಪ್ರಭಾರಿ ಡಾ. ಪ್ರವೀಣ ಪದ್ಯಾಣ ಹೇಳಿದರು. ವೇದಿಕೆಯ ಮೇಲೆ ಸಂಶೋಧನಾರ್ಥಿ ಶಶಾಂಕ ಹೆಚ್ ವಿ, ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿ ವಿನಯ ಎಂ ಹಾಗೂ ಪ್ರಥಮ ಸ್ನಾತಕೋತ್ತರ ವಿದ್ಯಾರ್ಥಿನಿ ಚೇತನಾ ಕೆ ಉಪಸ್ಥಿತರಿದ್ದರು. ವಿವಿಧ ಕನ್ನಡಪರ ಗೀತೆಗಳ ಗಾಯನವನ್ನು ವಿಭಾಗದ ವಿವಿಧ ವಿದ್ಯಾರ್ಥಿ ತಂಡಗಳು ನಡೆಸಿಕೊಟ್ಟವು. ಸಂಶೋಧನಾರ್ಥಿ ಸೋಮ ನಿಂಗ ಹಿಪ್ಪರಗಿ ಸ್ವಾಗತಿಸಿ, ನಿರೂಪಿಸಿ, ವಿನಯ ಎಂ ವಂದಿಸಿದರು.

KANNADA RAJYOTSAVA HELD AT PERIYA KASARAGOD

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts