ಸತತ ಎರಡು ದಿನಗಳಿಂದ ಹೈವೇ ಬಳಿಯ ದೇವಸ್ಥಾನಗಳಲ್ಲಿ ಕಳ್ಳತನ, ಸಿಸಿ ಕ್ಯಾಮರಾ ಇದ್ರೂ ಕ್ಯಾರೆನ್ನದೆ ಕೃತ್ಯ- ಸ್ಥಳಕ್ಕೆ ಪೊಲೀಸ್ ತಂಡ ಆಗಮಿಸಿ ಪರಿಶೀಲನೆ

ಫರಂಗಿಪೇಟೆ ಸಮೀಪ ಸುಜೀರು ಮತ್ತು ತುಂಬೆ ದೇವಸ್ಥಾನಗಳಿಗೆ ಕಳ್ಳರು ನುಗ್ಗಿದ್ದಾರೆ. ಸೋಮವಾರ ಮುಂಜಾನೆ ಸುಜೀರು ಎಂಬಲ್ಲಿರುವ ರವಳನಾಥ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದರೆ, ಮಂಗಳವಾರ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳವು ನಡೆದಿದೆ. ಮೊದಲ ದಿನದ ಕೃತ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾದರೆ, ಎರಡನೇ ದಿನ ಕ್ಯಾಮರಾ ಮತ್ತು ಡಿವಿಆರ್ ಅನ್ನೂ ಕಳ್ಳರು ಹೊತ್ತೊಯ್ದಿರುವುದು ಆಘಾತಕಾರಿ. ಸದ್ಯ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಪರಿಶೀಲನೆ ನಡೆಸಿದ್ದು, ಕಳ್ಳರ ಜಾಡು ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
ಫರಂಗಿಪೇಟೆ ಸಮೀಪ ಸುಜೀರ್ ಎಂಬಲ್ಲಿ,ನೂರಾರು ವರ್ಷಗಳ ಇತಿಹಾಸವಿದ್ದ  ದೇವರಿಗೆ ಸಂಬಂಧಿಸಿದ ಲಕ್ಷಾಂತರ ರೂ ಮೌಲ್ಯ ಬೆಲೆಬಾಳುವ ಚಿನ್ನಹಾಗೂ ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಹೋಗಿದ್ದು, ದೃಶ್ಯಾವಳಿಗಳು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ಬಂಟ್ವಾಳ ತಾಲೂಕಿನ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಸಮೀಪದ ಸುಜೀರು ಎಂಬಲ್ಲಿರುವ ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಸೋಮವಾರ ಮುಂಜಾನೆ ಸುಮಾರು 4 ಗಂಟೆಗೆ 2.30 ಲಕ್ಷದ ಮೌಲ್ಯದ ನಗನಗದುಗಳನ್ನು ಕಳ್ಳರು ಎಗರಿಸಿದ್ದಾರೆ.
ಮಂಗಳವಾರ ನಸುಕಿಗೂ ಮುನ್ನ ಸೋಮವಾರ ತಡರಾತ್ರಿಗೆ ತುಂಬೆಯ ದೇವಸ್ಥಾನವೊಂದಕ್ಕೆ ಕಳ್ಳರು ನುಗ್ಗಿದ್ದು, ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ತುಂಬೆಯಲ್ಲಿರುವ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದ ಮುಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ ಎಂದು ಹೇಳಲಾಗಿದೆ. ದೇವಸ್ಥಾನದ ಸುತ್ತ ಮುಂಜಾಗ್ರತಾ ಕ್ರಮವಾಗಿ ಸಿ.ಸಿ‌.ಕ್ಯಾಮರಾ ಅಳವಡಿಸಲಾಗಿದೆಯಾದರೂ ಕಳ್ಳರ ತಂಡ ಕ್ಯಾಮರಾ ಡಿ.ವಿ‌ಆರ್ ನ್ನು ಕೂಡ ಬಿಡದೆ ಎಗರಿಸಿದ್ದಾರೆ.   ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ‌.ಹರೀಶ್, ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿದ್ದು ತನಿಖೆ ನಡೆಯುತ್ತಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸತತ ಎರಡು ದಿನಗಳಿಂದ ಹೈವೇ ಬಳಿಯ ದೇವಸ್ಥಾನಗಳಲ್ಲಿ ಕಳ್ಳತನ, ಸಿಸಿ ಕ್ಯಾಮರಾ ಇದ್ರೂ ಕ್ಯಾರೆನ್ನದೆ ಕೃತ್ಯ- ಸ್ಥಳಕ್ಕೆ ಪೊಲೀಸ್ ತಂಡ ಆಗಮಿಸಿ ಪರಿಶೀಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*