ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಘಟನೆ: ಶ್ರೀಗಳಿಗೆ ಸೂಕ್ತ ರಕ್ಷಣೆ, ಮಠಕ್ಕೆ ಭದ್ರತೆ ನೀಡಲು ಬಂಟ್ವಾಳದ ಭಕ್ತಾಭಿಮಾನಿಗಳ ಒತ್ತಾಯ

ಎಡನೀರು ಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಕಾರು ಸಂಚರಿಸುವ ವೇಳೆ ದುಷ್ಕರ್ಮಿಗಳು ಅಡ್ಡಿಪಡಿಸಿ ದಾಳಿ ನಡೆಸಿದ ಕೃತ್ಯ ಖಂಡನೀಯ ಎಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀಗಳಿಗೆ ಹಾಗು ಮಠಕ್ಕೆ ಭದ್ರತೆ ಹಾಗೂ ರಕ್ಷಣೆಯನ್ನು ಕೂಡಲೇ ಸರಕಾರ ಒದಗಿಸಬೇಕು ಎಂದವರು ಒತ್ತಾಯಿಸಿದರು.

ಜಾಹೀರಾತು

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸಂಜೆ ಶ್ರೀ ಕ್ಷೇತ್ರ ಎಡನೀರು ಮಠದ ಭಕ್ತಾಭಿಮಾನಿಗಳ ಬಳಗದ ವತಿಯಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಾಸರಗೋಡು ಎಡನೀರು ಮಠವು ತನ್ನದೇ ಆದ ವಿಶಿಷ್ಠ ಪರಂಪರೆ ಹೊಂದಿದ್ದು ಎಲ್ಲಾ ಜಾತಿ, ಮತ, ಸಂಪ್ರದಾಯಗಳನ್ನು ಗೌರವಿಸುವ ಹಿನ್ನೆಲೆ ಹೊಂದಿದೆ. ಮುಖ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಸ್ವಾಮೀಜಿಯವರು ತೆರಳುತ್ತಿರುವುದನ್ನು ಕಂಡು ದುರುದ್ದೇಶ ಪೂರ್ವಕವಾಗಿ ‌ ಆಕ್ರಮಣಕಾರಿ ರೀತಿಯಲ್ಲಿ ಕಾರಿಗೆ ಹಾನಿಗೊಳಿಸಿ ಬೆದರಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. ಲಕ್ಷಾಂತರ ಮಠದ ಅಭಿಮಾನಿಗಳಿಗೆ ಈ ಘಟನೆಯಿಂದ ಖೇದವಾಗಿದೆ ಎಂದ ಅವರು, ಕನ್ನಡ ಭಾಷಾ ಸಾಹಿತ್ಯ,ಯಕ್ಷಗಾನ ಹಾಗೂ ವಿವಿಧ ಕಲೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಶ್ರೀ ಮಠಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು‌ ಆಗ್ರಹಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಪ್ರತಿಷ್ಠಾನದ ಕೋಶಾಧಿಕಾರಿ ಅನಾರು ಕೃಷ್ಣ ಶರ್ಮ, ಜಿಲ್ಲಾ ಪ್ರತಿನಿಧಿ ರಾಜಮಣಿ ರಾಮಕುಂಜ, ಬಂಟ್ವಾಳ ತಾಲೂಕು‌ ಅಧ್ಯಕ್ಷ ಸುಬ್ರಾಯ ಮಡಿವಾಳ, ಕಾರ್ಯದರ್ಶಿ ಕೋಕಳ ರಾಮಕೃಷ್ಣ ನಾಯಕ್ ಹಾಗೂ ಡಾ.ಮಹಾಲಿಂಗ ಭಟ್, ನ್ಯಾಯವಾದಿ ರವೀಂದ್ರ ಕುಕ್ಕಾಜೆ, ಶೇಖರ ಡಿ. ಮಂಚಿ ಮತ್ತು ಜಯಾನಂದ ಪೆರಾಜೆ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಘಟನೆ: ಶ್ರೀಗಳಿಗೆ ಸೂಕ್ತ ರಕ್ಷಣೆ, ಮಠಕ್ಕೆ ಭದ್ರತೆ ನೀಡಲು ಬಂಟ್ವಾಳದ ಭಕ್ತಾಭಿಮಾನಿಗಳ ಒತ್ತಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*