ಬಂಟ್ವಾಳ

ಸಮರ್ಪಕ ತರಬೇತಿಯಿಂದ ದಿವ್ಯಾಂಗ ಮಕ್ಕಳು ಸಬಲ: ಡಾ. ಅನುರಾಧಾ ಕಾಮತ್

ಬಂಟ್ವಾಳ: ದಿವ್ಯಾಂಗ ಮಕ್ಕಳೆಂದು ಹೆತ್ತವರು ಬೇಸರಿಸದೆ, ಸರಿಯಾದ ತರಬೇತಿಯನ್ನು ನೀಡಿದರೆ, ಮಕ್ಕಳು ಸಬಲರಾಗುತ್ತಾರೆ ಎಂದು ಮಕ್ಕಳ ತಜ್ಞ ವೈದ್ಯೆ ಡಾ. ಅನುರಾಧಾ ಕಾಮತ್ ಹೇಳಿದರು.

ಜಾಹೀರಾತು

ಬಂಟ್ವಾಳ ತಾಲೂಕಿನ ವಿಶೇಷ ಅಗತ್ಯವುಳ್ಳ ಮಕ್ಕಳಿಗಾಗಿ ಕೆಲಸ ಮಾಡುವ ವಿಕಾಸಂ ಸೇವಾ ಫೌಂಡೇಶನ್ ನ ಬಿ.ಸಿ.ರೋಡ್ ಕಚೇರಿಯಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸಕ್ಷಮ ಕರ್ನಾಟಕದ ದಕ್ಷಿಣ ಪ್ರಾಂತ ಪ್ರಮುಖ್ ಡಿ. ಕೇಶವ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದಿವ್ಯಾಂಗರಲ್ಲಿ ವಿಶೇಷವಾದ ಪ್ರತಿಭೆ ಇರುತ್ತದೆ, ಅವರು ಸಮಾಜದ ವೈವಿಧ್ಯತೆಯ ಪ್ರತೀಕವಾಗಿದ್ದಾರೆ, ಅವರ ಅಭಿವೃದ್ಧಿಯ ಮೂಲಕ ಸಮಾಜವೂ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

ವಿಕಾಸಂ ಸೇವಾ ಫೌಂಡೇಶನ್ ನ ಆಡಳಿತ ನಿರ್ದೇಶಕ ಗಣೇಶ್ ಭಟ್ ವಾರಣಾಸಿ ಪ್ರಾಸ್ತಾವಿಕ ನುಡಿಗಳಲ್ಲಿ ವಿಕಾಸಂ ಸೇವಾ ಫೌಂಡೇಶನ್ ಕಳೆದೊಂದು ವರುಷದಲ್ಲಿ ದಿವ್ಯಾಂಗ ಮಕ್ಕಳಿಗೆ ವಿವಿಧ ತರಬೇತಿಗಳನ್ನು ನೀಡಿ ಸಮನ್ವಯ ಶಿಕ್ಷಣಕ್ಕೆ ಅವರನ್ನು  ಅಣಿಗೊಳಿಸುತ್ತಿರುವ ರೀತಿ, ಅಂಗನವಾಡಿ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮಕ್ಕಳಲ್ಲಿ ಆರಂಭಿಕ ಹಂತದಲ್ಲಿರುವ ವೈಕಲ್ಯತೆಯನ್ನು ಕಂಡುಹಿಡಿಯುವ ಕುರಿತಾಗಿ ಸಂಸ್ಥೆ ತರಬೇತಿಯನ್ನು ಕೊಡುತ್ತಿರುವ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭ ಮಕ್ಕಳಿಗೆ ವಿವಿಧ ವಿನೋದ ಆಟಗಳನ್ನು ನಡೆಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಹಿರಿಯ ಶಿಕ್ಷಕಿ ರೇಣುಕಾ ವಂದನಾರ್ಪಣೆ ನಡೆಸಿದರು.  ಎಮ್ ಎಸ್ ಡಬ್ಲ್ಯು ವಿದ್ಯಾರ್ಥಿನಿ ಮಾನಸ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts