ಬಂಟ್ವಾಳ: ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಸ್ಥಾಪಕಾಧ್ಯಕ್ಷ, ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ (71) ಕೆಲಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದರು. ಪತ್ನಿ, ಪುತ್ರಿಯನ್ನು ಅವರು ಅಗಲಿದ್ದಾರೆ.
ಜಾಹೀರಾತು
ರೈತ, ಕಾರ್ಮಿಕ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಅವರು, ಸಾಮಾಜಿಕ ನ್ಯಾಯಪರ ಹೋರಾಟ ಸಮಿತಿ, ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ಸ್ಥಾಪನೆ ಮಾಡಿ ಜನಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಟೂರಿಸ್ಟ್ ಕಾರು ಚಾಲಕ ಮತ್ತು ಮಾಲೀಕರ ಸಂಘದ ಬಂಟ್ವಾಳ ತಾಲೂಕು ಸ್ಥಾಪಕಾಧ್ಯಕ್ಷರಾಗಿ, ಪ್ರಸ್ತುತ ಗೌರವಾಧ್ಯಕ್ಷರೂ ಆಗಿದ್ದ ಅವರು ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟ, ಟೋಲ್ ಗೇಟ್ ವಿರೋಧಿ ಹೋರಾಟ, ಹೆದ್ದಾರಿ ಅಭಿವೃದ್ಧಿ ಪರ ಹೋರಾಟ ಸಹಿತ ಹಲವು ಜನಪರ ಹೋರಾಟಗಳನ್ನು ಸಂಘಟಿಸುವ ಮೂಲಕ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುತ್ತಿದ್ದರು. ಸಾಮಾಜಿಕ ಸಮಸ್ಯೆಗಳು ಹಾಗೂ ಸಮಕಾಲೀನ ವ್ಯವಸ್ಥೆಯಲ್ಲಿನ ಅಸಮಾನತೆಗಳ ವಿರುದ್ಧ ಧ್ವನಿ ಎತ್ತುತ್ತಿದ್ದ ಅವರು, ಸದಾ ಸಮಸ್ಯೆಗಳ ವಿರುದ್ಧ ಹೋರಾಟವನ್ನು ಸಂಘಟಿಸುತ್ತಿದ್ದರು. ಅವರ ನಿಧನಕ್ಕೆ ವಿವಿಧ ಜನಪರ ಸಂಘಟನೆಗಳು ಸಂತಾಪ ವ್ಯಕ್ತಪಡಿಸಿವೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ ನಿಧನ"
Be the first to comment on "ಸಾಮಾಜಿಕ ಹೋರಾಟಗಾರ ಬಿ.ಎಂ.ಪ್ರಭಾಕರ ದೈವಗುಡ್ಡೆ ನಿಧನ"