ಬೀಡಿ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೊಳಿಸಲು ಎಐಟಿಯುಸಿ ಒತ್ತಾಯ

ಜಾಹೀರಾತು

ಬಂಟ್ವಾಳ: ಪಾಣೆಮಂಗಳೂರು ಫಿರ್ಕಾ ಬೀಡಿ ಎಂಡ್‌ ಜನರಲ್‌ ವರ್ಕರ್ಸ್‌ ಯೂನಿಯನ್‌ ನ 46 ನೇ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಈ ಸಂದರ್ಭ ಬೀಡಿ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೊಳಿಸಲು ಒತ್ತಾಯಿಸಲಾಯಿತು. ಎಐಟಿಯುಸಿ ಸಂಯೋಜಿತ ಎಸ್ ಬೀಡಿ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ವಿ.ಎಸ್.ಬೇರಿಂಜ ಮಾತನಾಡಿ, ಬೀಡಿ ಕಾರ್ಮಿಕರಿಗೆ ಕನಿಷ್ಟ ವೇತನ 5 ವರ್ಷಕ್ಕೊಮ್ಮೆ ಪರಿಷ್ಕರಣೆಯಾಗಿ ಜಾರಿಗೆ ಬರಬೇಕಾದುದು ರೂಢಿ. ಆದರೆ ಇದೀಗ 5 ವರ್ಷ ಕಳೆದರೂ ಮಾಲೀಕರು ಕನಿಷ್ಠ ವೇತನ ಜಾರಿಗೊಳಿಸುವ ಬಗ್ಗೆ ಕರೆದ ಪ್ರಮುಖ ಸಭೆಗಳಲ್ಲಿ ಆಸಕ್ತಿ ತೊರುತ್ತಿಲ್ಲ. ಈ  ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಮುತುವರ್ಜಿ ವಹಿಸಿ ಕನಿಷ್ಟ ವೇತನ ಅತೀ ಶೀಘ್ರ ಜಾರಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಕಳಪೆ ಗುಣಮಟ್ಟದ ಕಚ್ಚಾ ಸಾಮಾಗ್ರಿಗಳನ್ನು ವಿತರಿಸಿ ಬೀಡಿ ತಯಾರಿಸುವಾಗ ಆಗುವ ನಷ್ಟವನ್ನು ಕಾರ್ಮಿಕರಿಂದಲೇ ವಸೂಲಿ ಮಾಡುವ ಪದ್ಧತಿ ವಿರುದ್ಧ ಬೀಡಿ ಕಾರ್ಮಿಕರು ಸಂಘಟಿತ ಹೋರಾಟ ನಡೆಸಬೇಕಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಿ.ಶೇಖರ್‌ಮ ಬೀಡಿ ಕಾರ್ಮಿಕರು ತಮ್ಮ ಐತಿಹಾಸಿಕ ಹೋರಾಟಗಳಿಂದ ಗಳಿಸಿಕೊಂಡ ಕಾನೂನುಗಳನ್ನು ಕಸಿದುಕೊಳ್ಳು ಸರಕಾರ ಹವಣಿಸುತ್ತಿದೆ ಎಂದರು.

ಎಐಟಿಯುಸಿ ಜಿಲ್ಲಾಧ್ಯಕ್ಷ ವಿ.ಕುಕ್ಯಾನ್‌ ಮಾತನಾಡಿ ಬೀಡಿ ಕಾರ್ಮಿಕರಿಗೆ ತಮ್ಮ ಪರವಾಗಿ ಧ್ವನಿ ಎತ್ತಲು ದುಡಿಯುವ ವರ್ಗದ ಪ್ರತಿನಿಧಿಯೊಬ್ಬನನ್ನು ಶಾಸನ ಸಭೆಗೆ ಕಳುಹಿಸುವ ಸಾಮರ್ಥ್ಯ ಇದೆ ಎಂದರು.

ಸಿಪಿಐ ಪಕ್ಷ ಶತಮಾನೋತ್ಸವ ಯಶಸ್ವಿಗೊಳಿಸಲು ಈ ಸಂದರ್ಭ ತೀರ್ಮಾನಿಸಲಾಯಿತು. ಮಹಾಸಭೆಯನ್ನುದ್ದೇಶಿಸಿ ಬೀಡಿ ಎಂಡ್‌ ಟೊಬೆಕ್ಕೋ ಲೇಬರ್‌ ಯೂನಿಯನ್ ಮಂಗಳೂರು ನ ಕೋಶಾಧಿಕಾರಿ ಎಂ.ಕರುಣಾಕರ್‌, ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಭಾರತಿ ಶಂಭೂರು ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷೆ ಉಮಾವತಿ ಕುರ್ನಾಡು ವಹಿಸಿದ್ದರು. 2023-24 ನೇ ಸಾಲಿನ ಚಟುವಟಿಕಾ ವರದಿ ಮತ್ತು ಲೆಕ್ಕ ಪತ್ರವನ್ನು ಸಂಘದ ಕಾರ್ಯದರ್ಶಿ ಸುರೇಶ್‌ ಕುಮಾರ್‌ ಮಂಡಿಸಿದರು. ಕನಿಷ್ಠ ವೇತನ ತುಟ್ಟಿಭತ್ತೆ ನಿರ್ಣಯ ಸೇರಿದಂತೆ ಸುಮಾರು ಹತ್ತು ಹಲವಾರು ಪ್ರಮುಖ ಬೇಡಿಕೆಗಳ  ನಿರ್ಣಯ ಮಂಡಿಸಲಾಯಿತು.

2023-24 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆದು ಅಧ್ಯಕ್ಷರಾಗಿ ಉಮಾವತಿ ಕುರ್ನಾಡು, ಉಪಾಧ್ಯಕ್ಷರುಗಳಾಗಿ ಸೀತಾ ಅನಂತಾಡಿ, ಭಾರತಿ ಪ್ರಶಾಂತ್‌, ಕುಸುಮ ಕಳ್ಳಿಗೆ, ರೇವತಿ ಎಸ್,  ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್‌ ಕುಮಾರ್‌, ಸಹಕಾರ್ಯದರ್ಶಿಗಳಾಗಿ ಶಮಿತಾ, ಮಮತಾ. ಮೋಹಿನಿ ಬಿಸಿರೋಡು. ಯಶವಂತಿ ಚೇಳೂರು ಹಾಗೂ ಕೋಶಾಧಿಕಾರಿಯಾಗಿ ಬಿ.ಶೇಖರ್‌ ಅವರುಗಳು ಸರ್ವಾನುಮತದಿಂದ ಆಯ್ಕೆಯಾದರು. ಕಾರ್ಯದರ್ಶಿ ಸುರೇಶ್‌ ಕುಮಾರ್‌ ಸ್ವಾಗತಿಸಿ, ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬೀಡಿ ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೊಳಿಸಲು ಎಐಟಿಯುಸಿ ಒತ್ತಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*