ಬಂಟ್ವಾಳ

ಕಚೇರಿ ಕರ್ತವ್ಯದಲ್ಲಿದ್ದಾಗ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿ ನಿಧನ

 ಬಂಟ್ವಾಳ: ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬ ಗ್ರಾಮದ ಮಜ್ಜೋನಿ ನಿವಾಸಿ ಜಯರಾಮ‌ ಮೂಲ್ಯ (45) ಮೃತಪಟ್ಟವರಾಗಿದ್ದಾರೆ. ಅವರು ಕಳೆದ ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜಾಹೀರಾತು

ರಾತ್ರಿ ಕಚೇರಿಯ ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ನಿಧನರಾಗಿರಬಹುದು ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಸುಮಾರು 6.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕರು ಕಿಟಕಿ ಬಾಗಿಲು ತೆರದು ನೋಡಿದಾಗ ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿ ಜಯರಾಮ ಇದ್ದಿರುವುದು ಕಂಡು ಬಂದಿದೆ.ಅವರು ತಾಯಿ ಹಾಗೂ ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.