ಬಂಟ್ವಾಳ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಲಾಭಾಂಶ ವಿತರಣೆ

ಬಂಟ್ವಾಳ: ನರಿಕೊಂಬುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳದ ತುಂಬೆ ವಲಯದ ನರಿಕೊಂಬು ಕಾರ್ಯಕ್ಷೇತ್ರದ ಎ ಮತ್ತು ಬಿ ಒಕ್ಕೂಟದ ಸದಸ್ಯರುಗಳಿಗೆ ಸದಸ್ಯರು ಸಂಘಗಳಲ್ಲಿ ಮಾಡಿದ ವ್ಯವಹಾರಗಳಿಗೆ ಸಿಗುವ ಲಾಭಾಂಶ ವಿತರಿಸಲಾಯಿತು.

ಜಾಹೀರಾತು

ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಅವರು ಮಂಗಳ ಗೌರಿ ಹಾಗೂ ಶಿವಶಕ್ತಿ ಸಂಘಕ್ಕೆ ಲಾಭಾಂಶದ ಪತ್ರ ವಿತರಿಸಿ ಮಾತನಾಡಿ ಗ್ರಾಮದ ಅಭಿವೃದ್ಧಿ ದೃಷ್ಟಿಯಲ್ಲಿ ವೀರೇಂದ್ರ ಹೆಗ್ಗಡೆಯವರ ದೂರ ದೃಷ್ಟಿಯ ಯೋಜನೆಗಳು ಬಹಳ ಪರಿಣಾಮಕಾರಿ ಬೀರಿದೆ, ಗ್ರಾಮದ ಶಾಲೆಗಳಿಗೆ,ದೇವಸ್ಥಾನಗಳಿಗೆ, ಹಾಗೂ ಸಮುದಾಯದ ಇನ್ನಿತರ ಕಾರ್ಯಗಳಿಗೆ ಯೋಜನೆಯಿಂದ ಸೇವಾ ರೂಪದಲ್ಲಿ  ದೊರೆಯುವ ಅನುದಾನ ಗ್ರಾಮದ ಅಭಿವೃದ್ಧಿಯಲ್ಲಿ  ಪ್ರಮುಖ ಪಾತ್ರ ವಹಿಸಿದೆ, ಯೋಜನೆಯ ಸಂಘಗಳ ಮೂಲಕ ಮಹಿಳೆಯರು ಸುಲಭ ರೀತಿಯಲ್ಲಿ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಕಲ್ಪಿಸಿಕೊಂಡು ಅಭಿವೃದ್ಧಿ ಹೊಂದಿದ್ದಾರೆ ಎಂದರು.

ಈ ಸಂದರ್ಭ ಪ್ರಗತಿಪರ ಕೃಷಿಕರಾದ ಪ್ರೇಮನಾಥ್ ಶೆಟ್ಟಿ ಅಂತರ, ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ನರಿಕೊಂಬು ಎ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ, ಉಪಾಧ್ಯಕ್ಷರಾದ ವಿಮಲ, ನರಿಕೊಂಬು ಬಿ ಒಕ್ಕೂಟದ ಅಧ್ಯಕ್ಷ ಜಯಂತ್ ಪಲ್ಲತ್ತಿಲ್ಲ, ನರಿಕೊಂಬು ಕಾರ್ಯಕ್ಷೇತ್ರದ ಒಕ್ಕೂಟಗಳ ಸೇವಾ ಪ್ರತಿನಿಧಿಗಳಾದ ಕುಸುಮಾವತಿ ಹಾಗೂ ಪ್ರತಿಭಾ, ಮಂಗಳ ಗೌರಿ ಹಾಗೂ ಶಿವ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts