ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಷಷ್ಠಿ ಮಹೋತ್ಸವ

ಬಂಟ್ವಾಳ: ಬಂಟ್ವಾಳ ತಾಲೂಕಿನಾದ್ಯಂತ ಷಷ್ಠಿ ಮಹೋತ್ಸವ ಶನಿವಾರ ನಡೆಯಿತು. ಸಜಿಪಮಾಗಣೆ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಮಾರ್ಗದರ್ಶನದಲ್ಲಿ ನಡೆದ ಷಷ್ಠಿ ಮಹೋತ್ಸವ ಮತ್ತು ಸಾಮೂಹಿಕ ಆಶ್ಲೇಷಾ ಪೂಜೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಎನ್.ಕೆ.ಶಿವ, ಹರಿಪ್ರಸಾದ್ ಭಂಡಾರಿ, ಶ್ರೀನಿವಾಸ ನಾಯ್ಕ್, ರಾಜು ಪೂಜಾರಿ, ಸುಮಂತು, ಧನಂಜಯ ಶೆಟ್ಟಿ ಮತ್ತಿತರರು ಪಾಲ್ಗೊಂಡರು. ಸಜಿಪನಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಶಂಭೂರು ಶಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ರಾಯಿ ಶ್ರೀ ಮಹಾಲಿಂಗೇರ್ಶವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವ ಮತ್ತು ದೇವರ ಬಲಿ ಉತ್ಸವ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹೋತ್ಸವವು ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ಇವರ ಮಾರ್ಗದರ್ಶನದಲ್ಲಿ ಶನಿವಾರ ನಡೆಯಿತು.

ಬೆಳಿಗ್ಗೆ 5 ಗಂಟೆಗೆ ಉಷಾ ಪೂಜೆಯೊಂದಿಗೆ ಆರಂಭಗೊಂಡು ಬಳಿಕ ದೇವರಿಗೆ ಪಂಚಾಮೃತ ಮತ್ತು ಪವಮಾನ ಅಭಿಷೇಕ ನಡೆಯಿತು. ಇದೇ ವೇಳೆ ಸಾಮೂಹಿಕ ಆಶ್ಲೇಷಾ ಬಲಿ, ನಾಗಬ್ರಹ್ಮ ಸುಬ್ರಹ್ಮನ್ಯೇಶ್ವರ ಭಜನಾ ಮಂಡಳಿ ತಂಡದಿಂದ ನೃತ್ಯ ಭಜನೆ ಸಹಿತ ದೇವರ ಬಲಿ ಉತ್ಸವ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಸಂಜೆ ದುರ್ಗಾ ನಮಸ್ಕಾರ ಪೂಜೆ, ರಾತ್ರಿ ಪರಿವಾರ ದೈವಗಳಾದ ರಕ್ತೇಶ್ವರಿ, ಕಲ್ಲುರ್ಟಿ, ಅಣ್ಣಪ್ಪ ಪಂಜುರ್ಲಿ ದೈವದ ನೇಮೋತ್ಸವ ನಡೆಯಿತು.

ದೇವಳದ ಪ್ರಧಾನ ಅರ್ಚಕ ಕೆ.ಸುಂದರ ರಾವ್, ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಆಡಳಿತಾಧಿಕಾರಿ ಪರೀಕ್ಷಿತ್ ಶೆಟ್ಟಿ, ಅರ್ಚಕ ನಾಗೇಶ ರಾವ್, ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಕುಮಾರ್ ಚೌಟ, ಅರಳ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಉಪಾಧ್ಯಕ್ಷ ಜಗದೀಶ ಆಳ್ವ ಅಗ್ಗೊಂಡೆ, ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಸದಸ್ಯ ರಶ್ಮಿತ್ ಶೆಟ್ಟಿ, ಉಷಾ ಸಂತೋಷ್ ಶಿವನಗರ, ಪ್ರಮುಖರಾದ ರಾಜಾ ಎಸ್.ಹೊಳ್ಳ, ಪ್ರಕಾಶ್ ಕುಮಾರ್ ಜೈನ್, ರವೀಂದ್ರ ಪೂಜಾರಿ, ಜಗದೀಶ ಕೊಯಿಲ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಮೋಹನ್ ಕೆ.ಶ್ರೀಯಾನ್, ಶರತ್ ಕುಮಾರ್ ಕೊಯಿಲ, ರಾಜೇಶ ಗೋವಿಂದ ಬೆಟ್ಟ, ಆನಂದ ಬುರಾಲು, ಲೋಕೇಶ ಕೈತ್ರೋಡಿ, ಚಂದ್ರಶೇಖರ ಆಚಾರ್ಯ, ದಯಾನಂದ ಸಪಲ್ಯ, ದಿನೇಶ ಸುವರ್ಣ, ಭಜನಾ ಮಂಡಳಿ ಅಧ್ಯಕ್ಷ ಜನಾರ್ದನ ಕೋಟ್ಯಾನ್ ಮತ್ತಿತರರು ಇದ್ದರು.

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕಿನಾದ್ಯಂತ ಸಂಭ್ರಮದ ಷಷ್ಠಿ ಮಹೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*