ಬಂಟ್ವಾಳ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ: ಮಹಿಳಾ ಸಬಲೀಕರಣಕ್ಕೆ ಯೋಜನೆ ವೇದಿಕೆ: ಮಮತಾ ಗಟ್ಟಿ

ಇಂದು ಸಮಾಜ ಜಾಗೃತಗೊಳ್ಳಲು ಮಹಿಳಾ ಸಬಲೀಕರಣ ಅಗತ್ಯವಾಗಿದೆ. ಆಧುನೀಕರಣದತ್ತ ಸಾಗುತ್ತಿರುವ ಮಹಿಳೆಯರು ಗ್ರಾಮಸಭೆ ಸಹಿತ ಸಮಾಜದ ಆಗುಹೋಗುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ದಾರೆ.

ಜಾಹೀರಾತು

ಬಂಟ್ವಾಳ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಘಟಕ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ವತಿಯಿಂದ ಬಂಟ್ವಾಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದಿದ್ದು, ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಸಮಾಜದ ಮುಖ್ಯವಾಹಿನಿಗೆ ಮಹಿಳೆಯರು ಬರಬೇಕು. ಅದೇ ಹೊತ್ತಿನಲ್ಲಿ ನಮ್ಮ ರೋಲ್ ಮಾಡೆಲ್ ಆಗಿರುವ ತಾಯಿ, ತಂದೆಯ ಪ್ರೋತ್ಸಾಹವನ್ನೂ ಪಡೆಯಬೇಕು. ಧರ್ಮಸ್ಥಳ ಯೋಜನೆಯ ಕಾರ್ಯಕ್ರಮಗಳು, ಹೇಮಾವತಿ ಹೆಗ್ಗಡೆಯವರ ಕಲ್ಪನೆಯ ಮೂಲಕ ಮಹಿಳಾ ಸಬಲೀಕರಣದ ಕಾರ್ಯಕ್ರಮಗಳೀಗ ಫಲ ನೀಡುತ್ತಿವೆ. ಸರಕಾರದಿಂದ ಮಹಿಳೆಯರಿಗೆಂದೇ ಹಲವು ಯೋಜನೆಗಳನ್ನು ರೂಪಿಸಲಾಗಿದ್ದು, ಇದನ್ನು ಸದುಪಯೋಗಪಡಿಸಿ, ಅಭಿವೃದ್ಧಿಗೆ ಸಂಬಂಧಿಸಿದ ಸಭೆಗಳಲ್ಲಿ ಮಹಿಳೆಯರು ಪಾಲ್ಗೊಂಡು ತಮ್ಮ ಹಕ್ಕುಗಳನ್ನು ಚಲಾಯಿಸಿ ಎಂದು ಸಲಹೆ ನೀಡಿದರು.

ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ ವಹಿಸಿದ್ದರು. ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಪ್ರಕಾಶ ಕಾರಂತ ನರಿಕೊಂಬು ಮಾತನಾಡಿ, ಮಹಿಳೆಯರು ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಗಟ್ಟಿ ನೆಲೆಗಟ್ಟನ್ನು ಒದಗಿಸಿದೆ ಎಂದರು. ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಮಾತನಾಡಿ, ಧರ್ಮಸ್ಥಳ ಯೋಜನೆಯ ದೂರದೃಷ್ಟಿಯ ಫಲವಾಗಿ ಮಹಿಳಾ ಸ್ವಾವಲಂಬನೆ ಸಾಧ್ಯವಾಗಿದೆ ಎಂದರು.

ನಿವೃತ್ತ ಸಿಡಿಪಿಓ ಗಾಯತ್ರಿ ಕಂಬಳಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಮಹಾಬಲ ಕುಲಾಲ್, ಒಕ್ಕೂಟದ ಮಾಜಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಪ್ರಮುಖರಾದ ಶೇಖರ ಸಾಮಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭ ನ್ಯಾಯವಾದಿ ಶೈಲಜಾ ರಾಜೇಶ್ ಒತ್ತಡ ನಿರ್ವಹಣೆಯೊಂದಿಗೆ ಯಶಸ್ವಿ ಹೆಜ್ಜೆಯತ್ತ ಮಹಿಳೆ ಎಂಬ ವಿಚಾರ ಮಂಡಿಸಿದರು. ಬಂಟ್ವಾಳ ವಲಯ ಯೋಜನಾಧಿಕಾರಿ ಜಯಾನಂದ ಪಿ. ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಸಂಘದ ಸದಸ್ಯೆ ಶಾರದಾ ಅನಿಸಿಕೆ ವ್ಯಕ್ತಪಡಿಸಿದರು. ಜ್ಞಾನವಿಕಾಸ ಯೋಜನೆ ಸಮನ್ವಯಾಧಿಕಾರಿ ಶ್ರುತಿ ವಂದಿಸಿದರು. ಮೇಲ್ವಿಚಾರಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ: ಮಹಿಳಾ ಸಬಲೀಕರಣಕ್ಕೆ ಯೋಜನೆ ವೇದಿಕೆ: ಮಮತಾ ಗಟ್ಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*