ಜೋಗ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: ಬಂಟ್ವಾಳ ತಾಲೂಕಿನ ನಾಲ್ವರಿಗೆ ತೀವ್ರ ಗಾಯ, ಮಾಹಿತಿ ಪಡೆದ ಶಾಸಕ ರಾಜೇಶ್ ನಾಯ್ಕ್ ಅವರಿಂದ ತುರ್ತು ಸ್ಪಂದನೆ

ಬಂಟ್ವಾಳ: ಬಂಟ್ವಾಳದ ಶಂಭೂರಿನಿಂದ ಜೋಗ್ ಫಾಲ್ಸ್ ಗೆ ಪ್ರವಾಸಕ್ಕೆಂದು  ತೆರಳಿದ್ದ ಖಾಸಗಿ ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಗಲ್ ಎಂಬಲ್ಲಿ ರಸ್ತೆಯಲ್ಲಿ ಪಲ್ಟಿಯಾಗಿದೆ, ಘಟನೆಯಲ್ಲಿ  ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದಂತೆ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರಿಗೂ ಗಾಯಗಳಾಗಿದ್ದು ಸಮೀಪವಿರುವ ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿಗಳಾದ ಯಶೋಧ ಹಾಗೂ ದೀಕ್ಷಿತಾ ಅವರಿಗೆ ಗಂಭೀರವಾಗಿ ಗಾಯವಾಗಿದ್ದು, ಇವರ ಜೊತೆ ಬಸ್ ನಲ್ಲಿದ್ದ ಇಬ್ಬರು ಪುಟಾಣಿ ಮಕ್ಕಳಿಗೆ ತಲೆ ಹಾಗು ಕಣ್ಣಿಗೆ ಗಾಯವಾಗಿದೆ ಎಂಬುದನ್ನು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಶಂಭೂರುವಿನಲ್ಲಿರುವ ಶ್ರೀಸಾಯಿ ಮಂದಿರದಿಂದ ಜೋಗ್ ಫಾಲ್ಸ್ ಗೆ ಪ್ರವಾಸ ಹೋಗಿದ್ದ ಖಾಸಗಿ ಬಸ್ ಜೋಗ್ ಫಾಲ್ಸ್ ಗೆ ಇನ್ನೇನು ತಲುಪಲು ಕೆಲವೇ ಕಿಮೀ ದೂರದ ಕಾರ್ಗಲ್ ಎಂಬಲ್ಲಿ ಹೋಗುತ್ತಿದ್ದಂತೆ ರಸ್ತೆಯಿಂದ ಹಳ್ಳಕ್ಕೆ ಉರುಳಿ ಬಿದ್ದಿದೆ.

ಬಂಟ್ವಾಳ ಮೂಲದ ಇಂಜಿನಿಯರ್ ಆಗಿರುವ ಚೈತ್ರೇಶ್ ಅವರು ಬಂಟ್ವಾಳ ‌ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗಮನಕ್ಕೆ ತಂದಿದ್ದಾರೆ. ಅಲ್ಲದೆ ರೋಗಿಗಳನ್ನು ಆಸ್ಪತ್ರೆಗೆ ಕೊಂಡುಹೋಗುವಲ್ಲಿ ಇವರು ಪ್ರಯತ್ನ ಗಮನ ಸೆಳೆದಿದೆ. ಶಾಸಕರು ಕೂಡಲೇ ಸ್ಪಂದಿಸಿದ್ದಲ್ಲದೆ ಗಾಯಳುಗಳನ್ನು ಅಲ್ಲಿನ ಸಾಗರ ಆಸ್ಪತ್ರೆಗೆ ದಾಖಲಿಸಲು ಬೇಕಾಗುವ ವ್ಯವಸ್ಥೆ ಕಲ್ಪಿಸಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿರುವ ಇಬ್ಬರು ಗಾಯಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆಯನ್ನು ಶಾಸಕರು ಮಾಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಸಂಪರ್ಕ ಮಾಡಿದ್ದಾರೆ, ಜೊತೆಗೆ ಅಲ್ಲಿನ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರಿಗೆ ಘಟನೆಯ ಕುರಿತು ಮಾಹಿತಿ ‌ನೀಡಿ ಗಾಯಗಳುಗಳನ್ನು ಆಸ್ಪತ್ರೆಗೆ ಸಾಗಿಸುವ ದೃಷ್ಟಿಯಿಂದ ಬೇಕಾಗುವ ಅಂಬ್ಯುಲೆನ್ಸ್ ವಾಹನಗಳನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.

ಶಾಸಕರ ಮನವಿ ಮೇರೆಗೆ ಬಂಟ್ವಾಳದ ಉದ್ಯಮಿ ಉದಯಕುಮಾರ್ ಅವರ ಸೋಧರ ಸಂಬಂಧಿಯಾಗಿರು ಜೋಗ ಕಾರ್ಗಲ್ ಪಟ್ಟಣ ಪಂಚಾಯತ್ ಸದಸ್ಯ ಹರೀಶ್ ಗೌಡ ಹಾಗೂ ಪಟ್ಟಣ ಪಂಚಾಯತ್ ಸದಸ್ಯರು ಗಳಾದ ಬಾಲಸುಬ್ರಹ್ಮಣ್ಯ ಮತ್ತು ಗುರುಸಿದ್ದಪ್ಪ ಅವರು ಸ್ಥಳಕ್ಕೆ ಧಾವಿಸಿ ಸುಮಾರು 10 ಅಂಬ್ಯುಲೆನ್ಸ್ ಮೂಲಕ ಗಾಯಗಳು ಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸುವ ಕಾರ್ಯ ಮಾಡಿದ್ದಾರೆ.ಶಂಭೂರಿನ ಶ್ರೀ ಸಾಯಿ ಮಂದಿರ ದಿಂದ ಇಂದು ಬೆಳಿಗ್ಗೆ 5 ಗಂಟೆಗೆ ಖಾಸಗಿ ಬಸ್ ಮೂಲಕ ಪ್ರಯಾಣ ಕೈಗೊಂಡಿದ್ದರು. ಶಂಭೂರು, ಪಾಣೆಮಂಗಳೂರು, ಬಿಸಿರೋಡು ಹಾಗೂ ಮಂಗಳೂರು ಕಡೆಯಿಂದ ಸುಮಾರು 45   ಜನರನ್ನು ಹತ್ತಿಸಿಕೊಂಡು ಜೋಗ್ ಫಾಲ್ಸ್ ಗೆ ತೆರಳಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜೋಗ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: ಬಂಟ್ವಾಳ ತಾಲೂಕಿನ ನಾಲ್ವರಿಗೆ ತೀವ್ರ ಗಾಯ, ಮಾಹಿತಿ ಪಡೆದ ಶಾಸಕ ರಾಜೇಶ್ ನಾಯ್ಕ್ ಅವರಿಂದ ತುರ್ತು ಸ್ಪಂದನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*