ನೂರು ಜನ್ಮಕೂ’ ಧಾರಾವಾಹಿ ಆರಂಭ — ಕಲರ್ಸ್ ಕನ್ನಡದಲ್ಲಿ ವಿವರಗಳು ಇಲ್ಲಿವೆ

ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿ.23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಈ ಹೊಸ ಧಾರಾವಾಹಿ ‘ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ.

ಮೊದಲ ನೋಟಕ್ಕೆ ‘ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕಥೆಯಿದು. ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ ಸಿಕ್ಕು ನಲುಗುವಾಗ ರಾಘವೇಂದ್ರಸ್ವಾಮಿಯ ಪರಮಭಕ್ತೆಯಾದ ಮೈತ್ರಿ ತನ್ನ ಶ್ರದ್ಧೆ ಹಾಗೂ ನಂಬಿಕೆಗಳ ಮುಖಾಂತರ ಅವನನ್ನು ರಕ್ಷಿಸಲು ಪಣತೊಡುತ್ತಾಳೆ. ಚಿರಂಜೀವಿಯ ಜೀವ ಕಾಪಾಡುತ್ತಲೇ ತಮ್ಮ ಪ್ರೀತಿಯನ್ನೂ ಉಳಿಸಿಕೊಳ್ಳಲು ಒದ್ದಾಡುವ ಹೆಣ್ಣಾಗಿ ಮೈತ್ರಿ ನೋಡುಗರ ಮನಸನ್ನು ಆವರಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ. ಧಾರಾವಾಹಿಯ ಕತೆಯನ್ನು ಚಿಕ್ಕಮಗಳೂರಿನ ಚೆಂದದ ಹಿನ್ನೆಲೆಯಲ್ಲಿ ಚಿತ್ರೀಕರಿಸಲಾಗಿದ್ದು, ‘ನೂರು ಜನ್ಮಕೂ’ ಮಾನವೀಯ ಅಂತಃಕರಣ ಹಾಗೂ ಅತಿಮಾನುಷ ಶಕ್ತಿಗಳ ಅಟ್ಟಹಾಸವನ್ನು ಮುಖಾಮುಖಿಯಾಗಿಸುತ್ತದೆ. ಹಾಗಾಗಿ ರೋಚಕ ತಿರುವುಗಳನ್ನು ಪಡೆಯುತ್ತಾ ವೀಕ್ಷಕರನ್ನು ರಂಜಿಸುತ್ತದೆ. ಸಂಬಂಧಗಳು, ಕುಟುಂಬ ನಾಟಕಗಳು ಅದನ್ನು ಮತ್ತಷ್ಟು ರಸವತ್ತಾಗಿಸುತ್ತವೆ. ಉನ್ನತ ಮಟ್ಟದ ಗ್ರಾಫಿಕ್ಸ್ ಹೊಂದಿರುವ ಈ ಧಾರವಾಹಿ ಕನ್ನಡ ಪ್ರೇಕ್ಷಕರ ಮನಸೂರೆಗೊಳಿಸುತ್ತದೆ. ಕನ್ನಡ ಧಾರಾವಾಹಿಗಳಲ್ಲಿ ಅತಿಮಾನುಷ ಶಕ್ತಿಯ ಕತೆಗಳು ಕಡಿಮೆ. ಆ ಕೊರತೆಯನ್ನು ‘ನೂರು ಜನ್ಮಕೂ’ ಸಮರ್ಥವಾಗಿ ತುಂಬಲಿದೆ.  ಶ್ರವಂತ್ ರಾಧಿಕಾ ನಿರ್ದೇಶನದ ಈ ಧಾರಾವಾಹಿಯಲ್ಲಿ ಹೆಸರಾಂತ ನಟನಟಿಯರ ದಂಡೇ ಇದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಗೀತಾ’ ಧಾರಾವಾಹಿಯಲ್ಲಿ ನಾಯಕ ವಿಜಯ್ ಆಗಿ ನಟಿಸಿದ್ದ ಧನುಷ್ ಗೌಡ ಇದೀಗ ‘ನೂರು ಜನ್ಮಕೂ’ ಧಾರಾವಾಹಿಯಲ್ಲಿ ಚಿರಂಜೀವಿ ಪಾತ್ರದಲ್ಲಿ ನಿಮ್ಮ ಮುಂದೆ ಬರಲಿದ್ದಾರೆ.ಮಿಸ್ ಮಂಗಳೂರು ಕಿರೀಟ ಮುಡಿಗೇರಿಸಿಕೊಂಡಿದ್ದ ಶಿಲ್ಪಾ ಕಾಮತ್ ನಾಯಕಿಯಾಗಿ ಮೈತ್ರಿ ಪಾತ್ರದಲ್ಲಿ ನಿಮ್ಮನ್ನು ರಂಜಿಸಲಿದ್ದಾರೆ. ಕಥಾ ನಾಯಕಿ ಮೈತ್ರಿ, ರಾಘವೇಂದ್ರ ಸ್ವಾಮಿ ಭಕ್ತೆ. ಆಶಾವಾದಿ, ಸ್ವಾಭಿಮಾನಿ ಹಾಗೂ ತ್ಯಾಗಮಯಿ. ವಿಶೇಷ ಪಾತ್ರ ಅಂದ್ರೆ, ದೆವ್ವದ ಪಾತ್ರದಲ್ಲಿ ಚಂದನ ಗೌಡ ನಟಿಸುತ್ತಿದ್ದಾರೆ. 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನೂರು ಜನ್ಮಕೂ’ ಧಾರಾವಾಹಿ ಆರಂಭ — ಕಲರ್ಸ್ ಕನ್ನಡದಲ್ಲಿ ವಿವರಗಳು ಇಲ್ಲಿವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*