ಬಂಟ್ವಾಳ

ಧರ್ಮ ರಕ್ಷಣೆಗಾಗಿ ಬದುಕಿ ಬಾಳಿದ ವೀರ ಮಹಿಳೆ ಅಹಲ್ಯ ಬಾಯಿ ಹೋಳ್ಕರ್ : ಮೀನಾಕ್ಷಿ ಭಗಿನಿ

18ನೇ ಶತಮಾನದಲ್ಲಿ ಭಾರತ ದೇಶದಾದ್ಯಂತ 15 ಸಾವಿರಕ್ಕೂ ಹೆಚ್ಚು ಪುರಾತನ ಹಿಂದೂ ದೇವಾಲಯಗಳನ್ನು ಪುನರ್ಜಿವನ ಗೊಳಿಸಿ ಸನಾತನ ಹಿಂದೂ ಧರ್ಮ ರಕ್ಷಕಿಯಾಗಿ,ಲೋಕಮಾತೆಯಾಗಿ ಬದುಕಿ ಉಳಿದ ವೀರ ಮಹಿಳೆಯರಲ್ಲಿ ಅಹಲ್ಯ ಬಾಯಿ ಹೋಳ್ಕರ್ ಮೊದಲಿಗರು ಎಂದು ಎಂದು ರಾಷ್ಟ್ರಸೇವಿಕಾ ಸಮಿತಿಯ ದಕ್ಷಿಣ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಸಂಸ್ಕಾರ ಪರಿವೀಕ್ಷಕಿ ಮೀನಾಕ್ಷಿ ಭಗಿನಿ ರಾಯಿ ಹೇಳಿದ್ದಾರೆ.

ಜಾಹೀರಾತು

ರಾಷ್ಟ್ರಸೇವಿಕಾ ಸಮಿತಿ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಲೋಕಮಾತೆ ಅಹಲ್ಯ ಬಾಯಿ ಹೋಳ್ಕರ್ ತ್ರಿಶತಾಬ್ದಿ ಆಚರಣೆ ಅಂಗವಾಗಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಶಿಕ್ಷಣ ವರ್ಗದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅಹಲ್ಯ ಬಾಯಿ ಹೋಳ್ಕರ್ ಧಾರ್ಮಿಕ ಸುಧಾರಣೆಗಾಗಿ ಎಲ್ಲಾ ದೇವಸ್ಥಾನ ಗಳಲ್ಲಿ ಧಾರ್ಮಿಕ ಶಿಕ್ಷಣ ನೀಡಲು ಪ್ರಾರಂಭಿಸಿ, ಜಗತ್ತಿನಲ್ಲಿ ಏನೂ ಆಗುವುದಿದ್ದರೂ ಅದೂ ಭಗವಂತನ ದಿವ್ಯ ಶಕ್ತಿಯಿಂದ ಮಾತ್ರ ಸಾಧ್ಯ ಎಂದು ಭಕ್ತರಿಗೆ ಭೋದನೆ ಮಾಡುತಿದ್ದರು. ಸಾಮಾಜಿಕ ಸುಧಾರಣೆಯಿಂದಾಗಿ ಸಮಾಜದ ಸಮಗ್ರ ಬದಲಾವಣೆ ಸಾಧ್ಯವಿದೆ ಎಂದು ಮನಗಂಡಿರುವ  ಅಹಲ್ಯ ರವರು ವಿಧವೆ ಮಹಿಳೆಗೆ ಗೌರವಿಸಿ ವಿಧವೆಗೂ ಮರು ಮದುವೆ ಮಾಡುವ ಸಂಪ್ರದಾಯ ಜಾರಿಗೆ ತಂದ ದೇಶದ ಮೊಟ್ಟ ಮೊದಲ ರಾಣಿ ಅಹಲ್ಯ ಬಾಯಿ ಹೋಳ್ಕರ್ ಎಂದು ಹೇಳಿದರು .ಸ್ವದೇಶಿ ಉತ್ಪನ್ನಗಳಿಗೆ ಆದ್ಯತೆ ನೀಡಿ, ರೈತರಿಗೆ, ಕೃಷಿಕರಿಗೆ, ಸಮೃದ್ಧ  ಬೆಳೆ ಬೆಳೆಸಲು ಸಹಕಾರಿಯಾಗುವ ಉಚಿತವಾದ ಕೊಡುಗೆಗಳನ್ನು ನೀಡುತಿದ್ದರು. ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಪ್ರಾಮುಖ್ಯತೆ ಕೊಡುವುದರೊಂದಿಗೆ ದೇವಸ್ಥಾನ ಗಳ ಸುತ್ತಲೂ ನೀರಿನ ಕೆರೆಗಳನ್ನು ನಿರ್ಮಿಸುತಿದ್ದರು. ಸ್ತ್ರೀಶಕ್ತಿ ನಾರಿಯ ಕೈ ಗಳಿಗೆ ಬಳೆಗಳನ್ನು ತೊಡಲು ಗೊತ್ತು ಅವಶ್ಯಕತೆ ಬಂದ್ರೆ ಶಸ್ತ್ರಗಳನ್ನು ಹಿಡಿಯಲು ಗೊತ್ತು ಎಂದು ಧೈರ್ಯದ ಮಾತುಗಳಿಂದ ಎದುರಾಳಿಗಳನ್ನು ಮಾತಿನಿಂದಲೇ ಕಟ್ಟಿ ಹಾಕುವುದರೊಂದಿಗೆ ಶತ್ರುಗಳನ್ನು ಸೋಲಿಸುತಿದ್ದು ಅಹಲ್ಯ ಬಾಯಿ ಹೋಳ್ಕರ್ ರವರ ಧೈರ್ಯದ ಮಾತುಗಳು, ಗುಣಗಳು, ಆದರ್ಶಗಳನ್ನು ಭವಿಷ್ಯದ ಸಮಾಜಕ್ಕೆ ಹೇಳಿಕೊಡುವ ಅಗತ್ಯ ಇದೆ ಎಂದರು.

ಅಧ್ಯಕ್ಷತೆಯನ್ನು ವಹಿಸಿದ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಫದ ಅಧ್ಯಕ್ಷ ಪ್ರಭಾಕರ ಪ್ರಭು ಶುಭ ಹಾರೈಸಿದರು. ವೇದಿಕೆಯಲ್ಲಿ ರಾಷ್ಟ್ರ ಸೇವಿಕಾ ಸಮಿತಿ ಮಂಗಳೂರು ಗ್ರಾಮಾಂತರ ಜೆಲ್ಲೆಯ ಸಹ ಕಾರ್ಯವಾಹಿಕ ಉಷಾ ಮೂಡಬಿದ್ರೆ, ಬಂಟ್ವಾಳ ತಾಲೂಕು ಕಾರ್ಯವಾಹಿಕ ಪನಿಪ ಮಾಣಿ, ಸಿದ್ದಕಟ್ಟೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ, ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಪೂಜಾರಿ, ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಕುಮಾರ್ ರಾಯಿಬೆಟ್ಟು, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರ್, ಎಸ್. ಸಿ. ಡಿ. ಸಿ. ಸಿ. ಬ್ಯಾಂಕ್ ಸಿದ್ದಕಟ್ಟೆ ಶಾಖಾ ಮೆನೇಜರ್ ಜ್ಯೋತಿ, ಸಿದ್ದಕಟ್ಟೆ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಟೈಲರ್ ಮತ್ತು ಪ್ಯಾಶನ್ ಡಿಜೈನ್ ತರಬೇತಿದಾರೆ ಪ್ರೇಮ ಉಪಸ್ಥಿತರಿದ್ದರು.

ಸಂಘದ ನಿರ್ದೇಶಕರಾದ ಸಂದೇಶ ಶೆಟ್ಟಿ ಪೂಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಹರೀಶ್ ಆಚಾರ್ಯ ರಾಯಿ, ದಿನೇಶ್ ಪೂಜಾರಿ ಹುಲಿಮೇರು,ಮಂದಾರತಿ ಶೆಟ್ಟಿ, ಸಂಗಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಕುಲಾಲ್, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಬೇಬಿ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರತಿಭಾ ಶೆಟ್ಟಿ, ಪುಷ್ಪ, ಸುಜಾತಾ ಪೂಜಾರಿ, ವಿಮಲಾ ಮೋಹನ್ ಮೂಲ್ಯ,ಪ್ರೇಮಾ, ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts