ಪುತ್ತೂರು ಹೊರವಲಯದ ಪರ್ಲಡ್ಕ ಎಂಬಲ್ಲಿ ಕಾರೊಂದು ಕಂದಕಕ್ಕೆ ಉರುಳಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಶನಿವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಸುಳ್ಯ ಜಟ್ಟಿಪಳ್ಳದ ಚಿದಾನಂದ, ರಮೇಶ್ ಹಾಗೂ ಅಣ್ಣು ನಾಯ್ಕ ಮೃತಪಟ್ಟವರು ಎಂದು ತಿಳಿದುಬಂದಿದೆ. ಮಾಣಿ ಮೈಸೂರು ಹೆದ್ದಾರಿಯ ಬೈಪಾಸು ರಸ್ತೆಯಲ್ಲಿರುವ ಪರ್ಲಡ್ಕ ಬಳಿ ಸುಳ್ಯದ ಆಲ್ಟೊ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಉರುಳಿಬಿದ್ದಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)