ಬಂಟ್ವಾಳ

ಬದನಾಜೆ ಶಂಕರ ಭಟ್ ಮತ್ತು ಈಶ್ವರ ಮಲ್ಪೆ ಅವರಿಗೆ ಸರಿದಂತರ ಪ್ರಶಸ್ತಿ ಪ್ರದಾನ

ಬದನಾಜೆ ಶಂಕರ ಭಟ್

ಬಂಟ್ವಾಳ: ಬಂಟ್ವಾಳ ಕೈಕಂಬ ಜೋಡುಮಾರ್ಗ ಸರಿದಂತರ ಪ್ರಕಾಶನದ ವತಿಯಿಂದ ಭಾನುವಾರ ಕೈಕಂಬ ಶಮ್ಯಾಪ್ರಾಸದಲ್ಲಿ ನಡೆದ ಸಮಾರಂಭದಲ್ಲಿ ಕೃಷಿ ಪಂಡಿತ, ಸಂಶೋಧಕ ಬದನಾಜೆ ಶಂಕರ ಭಟ್ ಹಾಗೂ ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ಸರಿದಂತರ ಗೌರವ ಪುರಸ್ಕಾರ ಪ್ರದಾನ ಮಾಡಲಾಯಿತು.

ಜಾಹೀರಾತು

ಈಶ್ವರ ಮಲ್ಪೆ

ಮಂಗಳೂರು ರಾಮಕೃಷ್ಣ ಮಿಷನ್-ಸ್ವಚ್ಛ ಮಂಗಳೂರು ಅಭಿಯಾನದ ಪ್ರಧಾನ ಸಂಯೋಜಕ ರಂಜನ್ ಬೆಳ್ಳರ್ಪಾಡಿ ಅವರು ಮಾನವ ಸಂಬಂಧಗಳ ಕುರಿತು ಮಾತನಾಡಿದರು. ವೈದ್ಯ ಡಾ. ಎಂ.ಎಸ್.ಭಟ್ ಉಪಸ್ಥಿತರಿದ್ದರು. ಪ್ರಕಾಶನದ ಸಂಚಾಲಕ ರಾಜಮಣಿ ರಾಮಕುಂಜ ಪ್ರಸ್ತಾವನೆಗೈದರು. ಈಶ್ವರ ಮಲ್ಪೆ ಹಾಗೂ ಬದನಾಜೆ ಶಂಕರ ಭಟ್ ಅವರು ತಮ್ಮ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದರು. ಭಾರತಿ ರಾಮಕುಂಜ ಹಾಗೂ ಮೇಧಾ ರಾಮಕುಂಜ ಅವರು ಸಮ್ಮಾನ ಪತ್ರ ವಾಚಿಸಿದರು. ಜಗದೀಶ್ ಹೊಳ್ಳ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.