ಸಿದ್ಧಕಟ್ಟೆ: ಕಂಬಳ ಲೋಕ ಕೃತಿ ಬಿಡುಗಡೆ, ಛಾಯಾಗ್ರಹಣ ಪ್ರದರ್ಶನ

ಕಂಬಳ ಕ್ಷೇತ್ರದ ಕೋಣಗಳು ಮತ್ತು ಕೋಣಗಳ ಯಜಮಾನರು, ತೆರೆಮರೆಯಲ್ಲಿ ದುಡಿಯುವ ಹಲವರ ಬಗ್ಗೆ ಮಾಹಿತಿ ಸಂಗ್ರಹಿಸಿ ಪುಸ್ತಕ ರೂಪದಲ್ಲಿ ಮುದ್ರಣಗೊಳಿಸಿರುವುದು ಶ್ಲಾಘನೀಯ ಎಂದು ಕಂಬಳದ ಪ್ರಧಾನ ತೀರ್ಪುಗಾರ, ನಿವೃತ್ತ ಪ್ರಿನ್ಸಿಪಾಲ್ ಪ್ರೊ. ಗುಣಪಾಲ ಕಡಂಬ ಹೇಳಿದರು.

ಜಾಹೀರಾತು

ಸಿದ್ಧಕಟ್ಟೆ ಅಶ್ವಿನಿ ಸಭಾಂಗಣದಲ್ಲಿ ಗುಬ್ಬಚ್ಚಿಗೂಡು ರಮ್ಯ ನಿತ್ಯಾನಂದ ಶೆಟ್ಟಿ ಅವರ ಕಂಬಳ ಲೋಕ ಕೃತಿಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಮಚ್ಚಿನ ಕೃತಿ ಪರಿಚಯ ಮಾಡಿದರು. ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯಕ್ ಕರ್ಪೆ, ಕಂಬಳ ಕೋಣಗಳ ಮಾಲೀಕರಾದ ಮೂಡುಕೋಣಾಜೆ ಕೊಪ್ಪದೊಟ್ಟು ರಾಘವ ಸುವರ್ಣ, ಕೊಡಂಗೆ ಕಂಬಳದ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಪೊಡುಂಬ, ಡಾ.ಪ್ರಭಾಚಂದ್ರ ಜೈನ್, ಕೃಷಿಕ ಲೋಕನಾಥ ಶೆಟ್ಟಿ ಪಮ್ಮುಂಜ, ಕಂಬಳ ತೀರ್ಪುಗಾರ ಸಮಿತಿ ಸಂಚಾಲಕ ವಿಜಯಕುಮಾರ್ ಕಂಗಿನಮನೆ, ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಯೋಗೀಶ್ ಕೈರೋಡಿ, ನಿವೃತ್ತ ಪ್ರಿನ್ಸಿಪಾಲ್ ಸರಸ್ವತಿ ಭಟ್, ಛಾಯಾಗ್ರಾಹಕ ಚಿನ್ನ ಕಲ್ಲಡ್ಕ ಉಪಸ್ಥಿತರಿದ್ದರು.

ಶಿಕ್ಷಕ ಲಕ್ಷ್ಮೀನಾರಾಯಣ ಬೋರ್ಕರ್ ಮುನಿಯಾಲು, ಕಂಬಳದ ಮಾಜಿ ಓಟಗಾರ ಸರಪಾಡಿ ಜಾನ್ ಸಿರಿಲ್ ಡಿಸೋಜ ಯಾನೆ ಅಪ್ಪಣ್ಣ, ಕಂಬಳದ ಹವ್ಯಾಸಿ ಛಾಯಾಗ್ರಾಹಕ ಸುನಿಲ್ ಪ್ರಸಾದ್ ಅವರನ್ನು ಗೌರವಿಸಲಾಯಿತು.

ಹವ್ಯಾಸಿ ಛಾಯಾಗ್ರಾಹಕಿಯಾಗಿರುವ ಗುಬ್ಬಚ್ಚಿಗೂಡು ರಮ್ಯ ನಿತ್ಯಾನಂದ ಶೆಟ್ಟಿಯವರ ಛಾಯಾಗ್ರಹಣ ಪ್ರದರ್ಶನಕ್ಕೆ ಕಂಬಳ ಕೋಣಗಳ ಯಜಮಾನರಾದ ಅಲ್ಲಿಪ್ಪಾದೆ ದೇವಸ್ಯ ವಿಜಯ್ ವಿ ಕೋಟ್ಯಾನ್ ಚಾಲನೆ ನೀಡಿದರು. ಸಿದ್ಧಿಶ್ರೀ ಮಹಿಳಾ ಭಜನಾ ಮಂಡಳಿ ಕೊಯ್ಲ ಇಲ್ಲಿನ ಸದಸ್ಯರಿಂದ ದಾಸ ಸಂಕೀರ್ತನೆ ನಡೆಯಿತು. ಗ್ರಾಮೀಣ ಹಾಡು ಹಕ್ಕಿಗಳ ಕಲರವದಲ್ಲಿ ಸಂಕಮ್ಮ ಪ್ರಜಾರಿ ಹಾಗೂ ಕುಸುಮಾವತಿ ಅದ್ಭುತವಾಗಿ ಕಂಬಳ ಸಮಯದ ಸಂಧಿ ಹೇಳಿ ಗಮನ ಸೆಳೆದರು. ಬದ್ಯಾರು ಅಂಗನವಾಡಿ ಪುಟಾಣಿಗಳು ನೃತ್ಯ ಕಾರ್ಯಕ್ರಮ ನೀಡಿದರು. ಗುಬ್ಬಚ್ಚಿಗೂಡು ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಸ್ವಾಗತಿಸಿ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಿದ್ಧಕಟ್ಟೆ: ಕಂಬಳ ಲೋಕ ಕೃತಿ ಬಿಡುಗಡೆ, ಛಾಯಾಗ್ರಹಣ ಪ್ರದರ್ಶನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*