ಬಂಟ್ವಾಳ

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ

ಜಾಹೀರಾತು

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಹಿನ್ನೆಲೆಯಲ್ಲಿ ಮೊದಲ ದಿನವಾದ ಶನಿವಾರ (ಜ.11) ಶ್ರೀ ದೇವರ ಉತ್ಸವ ಬಲಿ, ಕಟ್ಟೆಪೂಜೆ, ಶ್ರೀರಂಗಪೂಜೆ ನಡೆಯಿತು. ಭಾನುವಾರ ಜ.12ರಂದು ಬೆಳಗ್ಗೆ ದೀಪಬಲಿ, ಶ್ರೀಭೂತಬಲಿ, ದರ್ಶನಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಂತ್ರಾಕ್ಷತೆ ನಡೆದು ಧೂಮಾವತಿ ದೈವದ ಭಂಡಾರ ಏರುವ ಪ್ರಕ್ರಿಯೆ ನಡೆಯಿತು. ರಾತ್ರಿ ಧೂಮಾವತಿ ಮತ್ತು ಕೊರತಿ ದೈವಗಳಿಗೆ ನೇಮ ನಡೆಯಲಿದೆ. ಬ್ರಹ್ಮಶ್ರೀ ಕುಂಟುಕುಡೇಲು ರಘುರಾಮ ತಂತ್ರಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಆಡಳಿತ ಮೊಕ್ತೇಸರರಾದ ಸೇರಾಜೆ ಸತ್ಯನಾರಾಯಣ ಭಟ್, ಸದಸ್ಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿದ್ದು, ಮೊದಲನೇ ಹಂತದ ಕೆಲಸ ಕಾರ್ಯಗಳ ಕುರಿತು ಪೂರ್ವಭಾವಿ ಸಭೆಯೂ ಇದೇ ವೇಳೆ ನಡೆಯಿತು.

PADYANA MAHALINGESHWARA TEMPLE, KAROPADI, BANTWAL TALUK, DAKSHINA KANNADA DISTRICT

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.