ಬಂಟ್ವಾಳ

ಸುವರ್ಣ ಸರಪಾಡಿ : ಪುಸ್ತಕ ಬಿಡುಗಡೆ, ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾಬಂಧು ವತಿಯಿಂದ ಕರಾವಳಿ ಕಲೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸರಪಾಡಿ ಯಕ್ಷಗಾನ ಅಭಿಮಾನಿ ಬಳಗದ ಸಹಕಾರದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿಯವರ ಯಕ್ಷಪಯಣದ 50ರ ಸಂಭ್ರಮ ಮತ್ತು ಪುಸ್ತಕ ಬಿಡುಗಡೆ ಸಮಾರಂಭ ಸುವರ್ಣ ಸರಪಾಡಿ ಕಾರ್ಯಕ್ರಮ ಬಿ.ಸಿ.ರೋಡಿನ ಗೋಲ್ಡನ್ ಪಾರ್ಕ್ ಮೈದಾನದಲ್ಲಿ ಶನಿವಾರ ನಡೆಯಿತು.

ಜಾಹೀರಾತು

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ದೀಪ ಪ್ರಜ್ವಲನೆ ಮಾಡಿ ಮಾತನಾಡಿ, ಇಂದು ಯಕ್ಷಗಾನದಲ್ಲಿ ಪಾತ್ರೋಚಿತವಾದ ಮಾತುಗಳನ್ನು ಅದ್ಭುತ ಅಭಿನಯದ ಮೂಲಕ ಮಾಡುವ ಕಲಾವಿದರ ಪೈಕಿ ಸರಪಾಡಿ ಅಶೋಕ ಶೆಟ್ಟರು ಅಗ್ರಪಂಕ್ತಿಯಲ್ಲಿ ಸೇರುತ್ತಾರೆ. ಅವರು ಯಕ್ಷಗಾನವಷ್ಟೇ ಅಲ್ಲ, ರಾಜಕೀಯ, ಸಮಾಜಸೇವೆಯಲ್ಲೂ ಮಿಂಚಿದವರು. ಕಲಾವಿದರಿಗಾಗಿ ಸ್ಪಂದಿಸಿದವರು ಎಂದು ಶ್ಲಾಘಿಸಿದರು,

ಅಧ್ಯಕ್ಷತೆಯನ್ನು ವಹಿಸಿದ್ದ ಸಂಘಟಕ ಬಿ.ಭುಜಬಲಿ ಧರ್ಮಸ್ಥಳ ಮಾತನಾಡಿ ಸರಪಾಡಿ ಅಶೋಕ ಶೆಟ್ಟರು ರಂಗದಲ್ಲಿದ್ದರೆ ಅದರ ಸೊಗಸೇ ಬೇರೆ ಎಂದು ಹೇಳಿ, ಅವರ ಕಲಾಬದುಕು ಇನ್ನಷ್ಟು ಔನ್ನತ್ಯಕ್ಕೇರಲಿ ಎಂದು ಹಾರೈಸಿದರು. ಹಿರಿಯರಾದ ಮೋಹನದಾಸ ಶೆಟ್ಟಿ ಮುನ್ನಪಾಯಿಗುತ್ತು ಅವರು ಪುಸ್ತಕ ಬಿಡುಗಡೆ ಮಾಡಿ ಶುಭ ಹಾರೈಸಿದರು. ಇದೇ ವೇಳೆ ಸರಪಾಡಿ ಅಶೋಕ ಶೆಟ್ಟರನ್ನು ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರವಾಗಿ ಮಾತನಾಡಿದ ಅವರು, ತಮ್ಮ ಸುದೀರ್ಘ ಯಕ್ಷಪಯಣದಲ್ಲಿ ಜತೆಕಲಾವಿದರು, ಅಭಿಮಾನಿಗಳು ಹಾಗೂ ಕಲಾಪೋಷಕರ ಪ್ರೀತಿ ವಿಶ್ವಾಸ ತನ್ನನ್ನು ಈ ವೇದಿಕೆಗೆ ಕರೆತರುವಂತೆ ಮಾಡಿದೆ ಎಂದರು. ಈ ಸಂದರ್ಭ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ದೇಜಪ್ಪ ಬಾಚಕೆರೆ ಅವರನ್ನು ಸನ್ಮಾನಿಸಲಾಯಿತು. ತಾರಾನಾಥ ಪಂಬದ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

ಅಭಿನಂದನಾ ಭಾಷಣವನ್ನು ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಮಾಡಿ, ಸರಪಾಡಿ ಅಶೋಕ ಶೆಟ್ಟರು ಕೇವಲ ಯಕ್ಷಗಾನ ಕಲಾವಿದರಷ್ಟೇ ಅಲ್ಲ, ಹಲವು ಕ್ಷೇತ್ರಗಳಲ್ಲಿ ದುಡಿದು ಗುರುತಿಸಿಕೊಂಡ ಕಾರಣ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವು ಸನ್ಮಾನಗಳು, ಪುರಸ್ಕಾರಗಳು ಅರ್ಹವಾಗಿಯೇ ದೊರಕಿದವು. ಅವರಂತೆ ಪಾತ್ರನಿರ್ವಹಣೆ ಮಾಡುವವರು ವಿರಳ ಎಂದು ಹೇಳಿದರು.

ಕರಾವಳಿ ಕಲೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ ಜೈನ್ ಪಂಜಿಕಲ್ಲು, ಸಸಿಹಿತ್ಲು ಮೇಳ ವ್ಯವಸ್ಥಾಪಕ ರಾಜೇಶ್ ಕೆ. ಗುಜರನ್, ಉದ್ಯಮಿ ಚಂದ್ರಹಾಸ ಶೆಟ್ಟಿ ರಂಗೋಲಿ, ಸದಾನಂದ ಶೆಟ್ಟಿ ರಂಗೋಲಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಚಿಣ್ಣರಲೋಕ ಸೇವಾ ಬಂಧು ಅಧ್ಯಕ್ಷ ಮೋಹನದಾಸ ಕೊಟ್ಟಾರಿ ಮುನ್ನೂರು, ರಂಗಭೂಮಿ ಕಲಾವಿದ ಪ್ರದೀಪ್ ಆಳ್ವ, ಉದ್ಯಮಿ ರಮೇಶ್ ಮಂಜೇಶ್ವರ,

ಸಾಹಿತಿ ಲಕ್ಷ್ಮೀನಾರಾಯಣ ರೈ ಹರೇಕಳ, ಪ್ರಮುಖರಾದ ಪುರುಷೋತ್ತಮ ಪೂಜಾರಿ ಮಜಲು, ವಿಲ್ಫ್ರೆಡ್ ಪ್ರಕಾಶ್ ಡಿಸೋಜ, ಅಭಿಷೇಕ್ ಸುವರ್ಣ ಉಪಸ್ಥಿತರಿದ್ದರು. ಬುಡಾ ಮಾಜಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ ಸ್ವಾಗತಿಸಿದರು. ಪ್ರಜ್ವಲ್ ಶೆಟ್ಟಿ ಸಿದ್ಧಕಟ್ಟೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.