ಬಂಟ್ವಾಳ

ಫ್ಲೈಓವರ್ ಕೆಳಗಿನಿಂದ ಕೈಕುಂಜೆ ರಸ್ತೆಗೆ ತಾತ್ಕಾಲಿಕವಾಗಿ ಶಿಫ್ಟ್ ಆದ ತರಕಾರಿ ವ್ಯಾಪಾರ — ಅಪಾಯ ಹಾಗೂ ಸುರಕ್ಷಿತ ಜಾಗದ ಅಗತ್ಯ ಕುರಿತು ಬಂಟ್ವಾಳನ್ಯೂಸ್ ಸಹಿತ ಮಾಧ್ಯಮಗಳು ಎಚ್ಚರಿಸಿದ್ದವು

ಬಿ.ಸಿ.ರೋಡ್ ಫ್ಲೈಓವರ್ ಕೆಳಗಿನ ಆಸುಪಾಸಿನಲ್ಲೆಲ್ಲಾ ತರಕಾರಿ, ಹಣ್ಣು, ಮೆಣಸು ಸಹಿತ ಹಲವು ಆಹಾರ ಪದಾರ್ಥಗಳನ್ನು ಹರಡಿ, ಮಾರಾಟ ಮಾಡುವ ಸಂದರ್ಭ ಖರೀದಿಗೆಂದು ಬರುವವರು ಅಪಾಯಕಾರಿ ಸನ್ನಿವೇಶಗಳನ್ನು ಎದುರಿಸುತ್ತಿರುವ ಬಗ್ಗೆ ಹಾಗೂ ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರನ್ನು ಆಧರಿಸಿ ಮಾಧ್ಯಮಗಳು ಮಾಡಿದ ವರದಿಗೆ ಪುರಸಭೆ ಸ್ಪಂದಿಸಿದೆ. ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಸೂಚನೆಯಂತೆ ಆರೋಗ್ಯ ನಿರೀಕ್ಷಕ ರತ್ನಪ್ರಸಾದ್ ಅವರು ಕಳೆದ ಭಾನುವಾರ ಮಾರಾಟಗಾರರಿಗೆ ಈ ಕುರಿತು ಸೂಚನೆಯನ್ನು ನೀಡಿದ್ದರು. ಅದರನ್ವಯ ಈ ಭಾನುವಾರ ಸಂತೆ ಕೈಕುಂಜ ರಸ್ತೆಗೆ ಶಿಫ್ಟ್ ಆಗಿದೆ. ಭೂಅಭಿವೃದ್ಧಿ ಬ್ಯಾಂಕ್ ಎದುರು ಭಾನುವಾರ ತರಕಾರಿ ವ್ಯಾಪಾರ ಕಂಡುಬಂತು. ಇದನ್ನು ತಾಲೂಕು ಪಂಚಾಯಿತಿ ಕಟ್ಟಡವಿದ್ದ ಜಾಗದಲ್ಲಿ ಸೂಕ್ತವಾದ ಜಾಗವನ್ನು ನೋಡಿ, ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಿ, ಸುರಕ್ಷಿತವಾಗಿ ಹಾಗೂ ಬೀದಿ ಬದಿ ವ್ಯಾಪಾರಕ್ಕೂ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗದಂತೆ ನಡೆಸುವ ಕುರಿತು ಯೋಚನೆಗಳು ನಡೆಯುತ್ತಿವೆ ಎಂದು ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ತಿಳಿಸಿದ್ದಾರೆ.

ಬಿ.ಸಿ.ರೋಡಿನಲ್ಲಿ ಭಾನುವಾರ ಸಂತೆ

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts