ವಿಶೇಷ ಅಗತ್ಯವುಳ್ಳ ಮಕ್ಕಳ ತಪಾಸಣೆ, ಪೋಷಕರಿಗೆ ತರಬೇತಿ ಶಿಬಿರ

ಮಂಗಳೂರು: ವಿಶೇಷ ಅಗತ್ಯವುಳ್ಳ ಮಕ್ಕಳಿಗಾಗಿ ಕೆಲಸ ಮಾಡುತ್ತಿರುವ ಮಂಗಳೂರಿನ ಶಕ್ತಿನಗರದ ಅರಿವು ಅರ್ಲಿ ಇಂಟರ್ವೆನ್ಶನ್ ಸೆಂಟರ್, ಬೆಂಗಳೂರಿನ ಅಸೋಸಿಯೇಶನ್ ಫಾರ್ ಪೀಪಲ್ ವಿದ್ ಡಿಸೇಬಲಿಟೀಸ್ ವತಿಯಿಂದ ಮಂಗಳೂರಿನ ನಂತೂರಿನಲ್ಲಿರುವ ಶ್ರೀ ಭಾರತೀ ಸಮೂಹ ಸಂಸ್ಥೆಗಳ ಸೇವಾ ಸಮಿತಿ ಸಹಯೋಗದೊಂದಿಗೆ ಕಾಲೇಜಿನ ಶಂಕರಶ್ರೀ ಸಭಾಂಗಣದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ತಪಾಸಣೆ ಹಾಗೂ ಪೋಷಕರ ತರಬೇತಿ ಶಿಬಿರ ಆಯೋಜಿಸಿತ್ತು.

ಅತಿಥಿಗಳಾಗಿ ಆಗಮಿಸಿದ ಮಂಗಳೂರಿನ ಶಿಶು ಅಭಿವೃದ್ಧಿ ಯೋಜನ ಅಭಿವೃದ್ದಿ ಅಧಿಕಾರಿ ಶ್ವೇತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇಂಥ ಕೇಂದ್ರಗಳ ಅಗತ್ಯವಿದ್ದು, ಅಂಗನವಾಡಿಯ ಮಕ್ಕಳಿಗೆ ಬಹಳ ಪ್ರಯೋಜನ ಆಗಿದೆ ಎಂದರು.

ಎ ಪಿ ಡಿ ಮಕ್ಕಳ ತಜ್ಞ ವೈದ್ಯರಾದ ಧನಂಜಯ ಮಾತನಾಡಿ, ಎ ಪಿ ಡಿ ಸ್ಥಳೀಯ ಸಂಸ್ಥೆಗಳಿಗೆ ತರಬೇತಿ ಕೊಟ್ಟು ಮಕ್ಕಳ ಬೆಳವಣಿಗೆಯ ಹಂತದಲ್ಲೇ ದೈಹಿಕ ಹಾಗೂ ಮಾನಸಿಕ ನ್ಯೂನತೆಗಳ ಕುರಿತು ತರಬೇತಿ ಹಾಗೂ ಬೆಳವಣಿಗೆಯ ಹಂತದಲ್ಲಿ ಯಾವ ರೀತಿಯ ಪೋಷಕರು ಮಹತ್ವದ ಪಾತ್ರ ವಹಿಸಬಹುದು ಎಂದರು.

ವೆನ್ಲೋಕ್ ಆಸ್ಪತ್ರೆಯ ಚರ್ಮರೋಗ ತಜ್ಞ ಡಾ. ನವೀನ್ ಮಾತನಾಡಿ, ವೆನ್ಲೋಕ್ ಆಸ್ಪತ್ರೆಯಿಂದ ದೊರಕುವ ಸೌಲಭ್ಯಗಳನ್ನು ವಿಶೇಷ ಮಕ್ಕಳ ಹೆತ್ತವರು ಪಡೆಯಬೇಕು, ಯುಡಿಐಡಿ ಕಾರ್ಡ್ ಪಡೆದರೆ, ಬಹಳಷ್ಟು ಪ್ರಯೋಜನವಾಗುತ್ತದೆ ಎಂದರು. ಶ್ರೀಭಾರತೀ ಪದವಿಪೂರ್ವ ಕಾಲೇಜು ಪ್ರಿನ್ಸಿಪಾಲ್ ಗಂಗಾರತ್ನ ಮಾತನಾಡಿ, ಭಾರತಿ ಸಮೂಹ ಸಂಸ್ಥೆ ವಿಶೇಷ ಮಕ್ಕಳಿಗೆ ಎಲ್ಲಾ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಲಯನ್ಸ್ ಕ್ಲಬ್ ವೆಲೆನ್ಸಿಯಾ ಅಧ್ಯಕ್ಷರಾದ ಲೆಸ್ಲಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ವೈದ್ಯ ಹಾಗೂ ಅರಿವು ಟ್ರಸ್ಟ್ ಅಧ್ಯಕ್ಷ ಡಾ. ಕೆ.ಸುಂದರ ಭಟ್ ಮಾತನಾಡಿ, ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡಿ, ಮುಖ್ಯವಾಹಿನಿಗೆ ಸೇರ್ಪಡೆಯಾಗುವಂತೆ ಮಾಡುವುದೇ ಅರಿವು ಉದ್ದೇಶ ಎಂದರು. ಅರಿವು ಸಂಸ್ಥೆಯ ಸ್ಥಾಪಕ ನಿರ್ದೇಶಕಿ ಪೂರ್ಣಿಮಾ ಆರ್. ಭಟ್ ಕಾರ್ಯಕ್ರಮದ ಉದ್ದೇಶಗಳನ್ನು ವಿವರಿಸಿದರು. ಈ ಸಂದರ್ಭ ಸಂಸ್ಥೆಯ ಟ್ರಸ್ಟಿ ಡಾ. ರಾಧಾಕೃಷ್ಣ ಭಟ್ ಉಪಸ್ಥಿತರಿದ್ದರು. ಸ್ವಾಗತವನ್ನು ಸಂಚಾಲಕಿ ತಿಲೋತ್ತಮೆ ಮಾಡಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿಶೇಷ ಅಗತ್ಯವುಳ್ಳ ಮಕ್ಕಳ ತಪಾಸಣೆ, ಪೋಷಕರಿಗೆ ತರಬೇತಿ ಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*