ಬಂಟ್ವಾಳ

ಅನಧಿಕೃತ ಫ್ಲೆಕ್ಸ್, ಹೆದ್ದಾರಿ ಅತಿಕ್ರಮಿಸಿ ವಹಿವಾಟು ವಿರುದ್ಧ ಫೆ.1ರಿಂದ ಕಾರ್ಯಾಚರಣೆ ಆರಂಭ

ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಮಿತಿಮೀರಿದ ಫ್ಲೆಕ್ಸ್ ಹಾವಳಿ ಹಾಗೂ ಫುಟ್ ಪಾತ್ ಅತಿಕ್ರಮಣ ಮಾಡಿ ಅನಧಿಕೃತ ರಚನೆಗಳನ್ನು ಹಾಕಿಕೊಂಡು ವಹಿವಾಟು ಮಾಡುವುದರ ವಿರುದ್ಧ ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡಲು ಅಧ್ಯಕ್ಷ ಬಿ.ವಾಸು ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಬಂಟ್ವಾಳ ಪುರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಜಾಹೀರಾತು

ಬುಧವಾರ ನಡೆದ ಸಭೆಯಲ್ಲಿ ಈ ಕುರಿತು ವಿಷಯ ಪ್ರಸ್ತಾಪಿಸಿದ ಸದಸ್ಯ ಹರಿಪ್ರಸಾದ್, ಫ್ಲೆಕ್ಸ್ ಹಾಗೂ ಬ್ಯಾನರ್ ಕಟ್ಟಲು ಸ್ಪಷ್ಟ ನಿಯಮಾವಳಿಗಳನ್ನು ಸಭೆಗೆ ತಿಳಿಸಬೇಕು, ಯಾವ ಮಾನದಂಡವನ್ನು ಅನುಸರಿಸಲಾಗುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆಹಿರಿಯ ಸದಸ್ಯ ಎ.ಗೋವಿಂದ ಪ್ರಭು ದನಿಗೂಡಿಸಿದರು.

ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ಮಾತನಾಡಿ, ಬಟ್ಟೆಯಲ್ಲಿ ರಚಿಸಲಾದ ಬ್ಯಾನರ್ ಗೆ ಮಾತ್ರ ಅವಕಾಶವಿದೆ. ಉಳಿದಂತೆ ಫ್ಲೆಕ್ಸ್, ಬ್ಯಾನರ್ ಕುರಿತು ಸ್ಪಷ್ಟ ಮಾರ್ಗಸೂಚಿಯನ್ನು ಅದನ್ನು ತಯಾರಿಸುವವರಿಗೆ ನೀಡಲು ಮಾರ್ಗದರ್ಶನ ಕಾರ್ಯಕ್ರಮವನ್ನು ಮಾಡಲಾಗುವುದು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸುಗಮವಾಗುವುದಕ್ಕೆ ಅಡಚಣೆ ಉಂಟಾಗುವ ಎಲ್ಲ ಫ್ಲೆಕ್ಸ್ ಮತ್ತು ಬ್ಯಾನರ್ ಗಳು ಹಾಗೂ ರಸ್ತೆ, ಬೀದಿ ಬದಿ ಫುಟ್ ಪಾತ್ ಗಳಲ್ಲಿ ಮಾಡು ಹಾಕಿ ಅಥವಾ ಅನಧಿಕೃತ ರಚನೆಗಳನ್ನು ಮಾಡಿಕೊಂಡು ವ್ಯಾಪಾರ, ವಹಿವಾಟು ಮಾಡುವುದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಫೆಬ್ರವರಿ 1ರಿಂದಲೇ ಗರುಡ ಕಾರ್ಯಾಚರಣೆ ಮೂಲಕ ಇದನ್ನು ಆರಂಭಿಸಲಾಗುತ್ತದೆ, ಸಾರ್ವಜನಿಕರು ಹಾಗೂ ಪುರಸಭಾ ಸದಸ್ಯರು ಇದಕ್ಕೆ ಸಹಕಾರ ನೀಡಬೇಕು ಎಂದರು

ಕುಡಿಯುವ ನೀರಿನ ಪೈಪ್ ಲೈನ್ ಸಂಬಂಧಿಸಿ ಹಿಂದೆ ವಿಶೇಷ ಸಭೆ ನಡೆಸಿ ಸುದೀರ್ಘ ಮಾತುಕತೆ ನಡೆಸಿದ್ದರೂ ಯಾವುದೇ ಅನುಷ್ಠಾನವಾಗಿಲ್ಲ ಎಂದು ಸದಸ್ಯರು ಪಕ್ಷಬೇಧ ಮರೆತು ದೂರಿದರು. ಕೊಟ್ರಮಣಗಂಡಿಯಲ್ಲಿ ಬಸ್ ನಿಲ್ದಾಣ ನಿರ್ಮಿಸಿ ವರ್ಷಗಳೇ ಕಳೆದರೂ ಇನ್ನೂ ಅಲ್ಲಿಗೆ ಬಸ್ ಬರುತ್ತಿಲ್ಲ, ಅದನ್ನುಬಳಕೆ ಮಾಡಲು ಕ್ರಮ ಕೈಗೊಳ್ಳಿ ಎಂದು ದೇವದಾಸ ಶೆಟ್ಟಿ ಬರೆದ ಪತ್ರಕ್ಕೆ ಸ್ಪಂದಿಸಿದ ಪುರಸಭಾಧ್ಯಕ್ಷ ವಾಸು ಪೂಜಾರಿ ಪೊಲೀಸ್ ಸಹಕಾರದಿಂದ ಅತಿ ಶೀಘ್ರದಲ್ಲಿ ಬಸ್ಸನ್ನು ಅಲ್ಲಿ ನಿಲ್ಲಿಸಲಾಗುವುದು ಎಂದರು. ವಿವಿಧ ವಿಷಯಗಳ ಕುರಿತು ನಡೆದ ಚರ್ಚೆಯಲ್ಲಿ ಸದಸ್ಯರಾದ ಪಿ.ರಾಮಕೃಷ್ಣ ಆಳ್ವ, ಮಹಮ್ಮದ್ ಶರೀಫ್, ಜನಾರ್ದನ ಚಂಡ್ತಿಮಾರ್, ಝೀನತ್ ಫಿರೋಜ್, ಮಹಮ್ಮದ್ ನಂದರಬೆಟ್ಟು, ಸಿದ್ದೀಕ್ ಗುಡ್ಡೆಯಂಗಡಿ, ಲುಕ್ಮಾನ್ ಬಂಟ್ವಾಳ, ವಿದ್ಯಾವತಿ ಪ್ರಮೋದ್ ಕುಮಾರ್, ಇದ್ರೀಸ್ ಪಿ.ಜೆ ಮತ್ತಿತರರು ಮಾತನಾಡಿದರು. ಉಪಾಧ್ಯಕ್ಷ ಮೊನೀಶ್ ಆಲಿ ವೇದಿಕೆಯಲ್ಲಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts