ಬಂಟ್ವಾಳ

ಅಸಮರ್ಪಕ ಟೋಲ್ ವ್ಯವಸ್ಥೆ ವಿರುದ್ಧ SDPI ಪ್ರತಿಭಟನೆ – ವಿವರಗಳು ಇಲ್ಲಿವೆ

 

 

ಮಂಗಳೂರು – ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ಸಂಬಂಧಪಟ್ಟಂತೆ ಅವೈಜ್ಞಾನಿಕ ಮತ್ತು ಅಸಮರ್ಪಕವಾದ ಟೋಲ್ ಸಂಗ್ರಹ ಕೇಂದ್ರ ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯಾವುದೇ ನಿಯಮಗಳನ್ನು ಪಾಲಿಸುತ್ತಿಲ್ಲ. ಹಾಗಾಗಿ ಟೋಲ್ ತೆರವು ಮಾಡಬೇಕು. ಸಮರ್ಪಕವಾದ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡಬೇಕು ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ತಿಳಿಸಿದ್ದಾರೆ.

ಅವರು ಬಿ.ಸಿ.ರೋಡಿನ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಸಂಜೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಳೆದ ೧೦ ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡು ಮಂಗಳೂರು ರಸ್ತೆ ಅಗಲೀಕರಣವಾಗಿದ್ದು ಆ ಬಳಿಕ ಯಾವುದೇ ರೀತಿಯ ನಿರ್ವಹಣೆಯಾಗುತ್ತಿಲ್ಲ. ಮಳೆಗಾಲದಲ್ಲಿ ತುಂಬೆ ತಿರುವು ಬಳಿ ಗುಡ್ಡದಿಂದ ಬರುವ ನೀರು ರಾಷ್ಟ್ರೀಯ ಹೆದ್ದಾರಿಯಲ್ಲೇ ಶೇಖರಣೆಯಾಗುತ್ತದೆ. ದಾರಿದೀಪದ ವ್ಯವಸ್ಥೆ ಇಲ್ಲ. ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಅವ್ಯವಸ್ಥೆಯಿಂದ ಕೂಡಿದೆ.  ಕೈಕಂಬ ಜಂಕ್ಷನ್‌ನಿಂದ ಬ್ರಹ್ಮರಕೂಟ್ಲು ಟೋಲ್‌ಗೇಟ್ ತನಕ ಶುಕ್ರವಾರ ಸಂಜೆ 3ಗಂಟೆಗೆ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಯಲಿದೆ ಎಂದು ತಿಳಿಸಿದರು.

ಬಂಟ್ವಾಳ ಪುರಸಭಾ ಉಪಾಧ್ಯಕ್ಷ ಮತ್ತು ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಮೊನಿಷ್ ಅಲಿ ಮಾತನಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಬೇ ವ್ಯವಸ್ಥೆ ಇಲ್ಲ, ಬ್ರಹ್ಮರಕೂಟ್ಲು ಟೋಲ್ ಪ್ಲಾಜಾ ಬಳಿ ಜಾಗದ ವ್ಯವಸ್ಥೆ ಇಲ್ಲ. ಟೋಲ್‌ನ ಸುಂಕ ವಸೂಲಿ ಮಾಡುವ ಗುತ್ತಿಗೆಯನ್ನು ಶ್ರೀಮಂತರು ಮಾಡುತ್ತಾರೆ. ನಿರಂತರವಾಗಿ ಮೂರು ವರ್ಷಕ್ಕೊಮ್ಮೆ ರಿನೀವಲ್ ಆಗುತ್ತದೆ. ಇದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಶಾಕಿರ್, ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts