ಚಿಂತೆಯಂತೆ ಕಾಡಿದ ಗೊಂದಲಗಳಿಗೆ ಬೆಳಕು ನೀಡಿದ ನಾರಾಯಣಗುರುಗಳು: ಸಂಜೀವ ಪೂಜಾರಿ

 

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಅಸಮಾನತೆಯ ವಿರುದ್ಧ ಸಂಘರ್ಷರಹಿತವಾದ ಸುಧಾರಣಾ ಕ್ರಾಂತಿಯನ್ನು ರೂಪಿಸಿ ಆ ಮೂಲಕ ಯಶಸ್ವಿಯಾದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಪ್ರತಿಯೊಂದು ಅನುಷ್ಠಾನ ಹಾಗೂ ಚಿಂತನೆಗಳು ಚಿಂತೆಯಂತೆ ಕಾಡುತ್ತಿರುವ ವರ್ತಮಾನದ ಗೊಂದಲಗಳಿಗೆ ಸೂಕ್ತ ಪರಿಹಾರವಾಗ ಬಲ್ಲ ಬೆಳಕಿನ ಮೌಲ್ಯವನ್ನು ಹೊಂದಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಜಿಪ ಮುನ್ನೂರು ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ ತಿಳಿಸಿದರು

ಯುವವಾಹಿನಿ ಬಂಟ್ವಾಳ ಘಟಕದ ಸಂಘಟನಾ ಕಾರ್ಯದರ್ಶಿ ಸೃಜನಿ ಇವರ ಬೊಳ್ಳಾಯಿ ಶಿವಗಿರಿ ನಿವಾಸದಲ್ಲಿ ನಡೆದ ಗುರುತತ್ವವಾಹಿನಿ  ಮಾಲಿಕೆ 30 ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು.

ಆದ್ಯಾತ್ಮದ ಮೂಲಕ ಜಾಗೃತ ಸಮಾಜ ನಿರ್ಮಾಣ ಸಾಧ್ಯ, ಈ ನಿಟ್ಟಿನಲ್ಲಿ ಗುರುತತ್ವವಾಹಿನಿ ಯಶಸ್ಸಿನ‌ ಹಿಂದೆ ಸಮಾಜದ ಹಿರಿಯರ ಸಹಕಾರವಿದೆ, ಸಂಘಟನಾತ್ಮವಾಗಿ ಗುರುಗಳ ಸಂದೇಶ ಯುವವಾಹಿನಿ ಅನುಷ್ಠಾನ ಮಾಡುತ್ತಿದೆ ಎಂದು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ಸಜಿಪ ಮೂಡ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯ ಅಧ್ಯಕ್ಷ ರಮೇಶ್ ಅನ್ನಪ್ಪಾಡಿ, ಸಜಿಪ ಮೂರ್ತೆದಾರರ ಸಹಕಾರಿ ಸೇವಾ ಸಂಘದ ನಿರ್ದೇಶಕ ಜಯಶಂಕರ್ ಕಾನ್ಸಾಲೆ, ಮೋಹನ್‌ದಾಸ್ ಬೊಳ್ಳಾಯಿ, ಯುವವಾಹಿನಿ ಬಂಟ್ವಾಳ ಘಟಕದ  ಕೋಶಾಧಿಕಾರಿ ಗೀತಾ ಜಗದೀಶ್, ನಿರ್ದೇಶಕರಾದ ಮಹೇಶ್ ಬೊಳ್ಳಾಯಿ, ಕಿರಣ್ ಪೂಂಜರೆಕೋಡಿ, ಮಧುಸೂದನ್ ಮಧ್ವ, ಸಂಘಟನಾ ಕಾರ್ಯದರ್ಶಿ ಉದಯ್ ಮೇನಾಡ್, ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕರ್ಕೇರ, ರಾಜೇಶ್ ಸುವರ್ಣ, ಗಣೇಶ್ ಪೂಂಜರಕೋಡಿ, ರಾಮಚಂದ್ರ ಸುವರ್ಣ, ನಾಗೇಶ್ ಪೊನ್ನೊಡಿ, ಶಿವಾನಂದ ಎಂ, ಅರುಣ್ ಬಿ.ಸಿರೋಡ್ ,ಸದಸ್ಯರಾದ ನವೀನ್ ಬಿ.ಸಿರೋಡ್, ಸುನಿಲ್ ಸುವರ್ಣ ಮರ್ದೊಳಿ, ಯತೀಶ್ ಬೊಳ್ಳಾಯಿ, ಶೈಲೇಶ್ ಕುಚ್ಚಿಗುಡ್ಡೆ, ಸತೀಶ್ ಬಾಯಿಲ, ನಾಗೇಶ್ ಏಲಬೆ, ವಿಘ್ನೇಶ್ ಬೊಳ್ಳಾಯಿ, ಅರ್ಜುನ್ ಅರಳ, ಪ್ರಶಾಂತ್ ಏರಮಲೆ, ಯಶೋಧರ ಕಡಂಬಲ್ಕೆ, ಯೋಗೀಶ್ ಕಲ್ಲಡ್ಕ, ಭವಾನಿ ನಾರಾಯಣ ಅಮೀನ್, ಸುನೀತಾ ನಿತಿನ್,ಸುಲತಾ ಬಿ.ಸಿರೋಡ್, ಶ್ರೇಯಾ ಬೊಳ್ಳಾಯಿ, ಸಜಿಪ ನಾರಾಯಣಗುರು ಜ್ಞಾನ ಮಂದಿರದ ಸದಸ್ಯರು ಉಪಸ್ಥಿತರಿದ್ದರು  ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಚಿಂತೆಯಂತೆ ಕಾಡಿದ ಗೊಂದಲಗಳಿಗೆ ಬೆಳಕು ನೀಡಿದ ನಾರಾಯಣಗುರುಗಳು: ಸಂಜೀವ ಪೂಜಾರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*