ಕಲ್ಲಡ್ಕ

ವೀರಕಂಭದಲ್ಲಿ ಮಕ್ಕಳ ಗ್ರಾಮಸಭೆ: ಶಾಲೆಗೆ ಬೇಕಾದ ಸೌಕರ್ಯಗಳ ಪಟ್ಟಿ ನೀಡಿದ ಮಕ್ಕಳು

 

ಜಾಹೀರಾತು

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಕ್ಕಳ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭ ಭಾಗವಹಿಸಿದ್ದ ಮಜಿ ಶಾಲೆ ಮಕ್ಕಳು, ಶಾಲೆಗೆ ಬೇಕಾದ ಸೌಕರ್ಯಗಳ ವಿಷಯಗಳ ಪಟ್ಟಿಯನ್ನು ನೀಡಿದರು.

ಅಧ್ಯಕ್ಷತೆಯನ್ನು ಮಜಿ ಸರಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿ ನಾಯಕಿ ಧನ್ವಿತಾ ವಹಿಸಿದ್ದರು. ಸುಗ್ರಾಮ ಸಂಯೋಜಕರಾದ ಚೇತನ್ ಮಕ್ಕಳ ಗ್ರಾಮಸಭೆಯ ಮಹತ್ವದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು. ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರೂಪಕಲಾ ಮಕ್ಕಳಿಗೆ ಹಾಗೂ ಮಹಿಳೆಯರಿಗೆ ಇಲಾಖೆಯಲ್ಲಿ ಸಿಗುವಂತ ಸೌಲಭ್ಯ, ರಕ್ಷಣೆಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಸಮುದಾಯ ಆರೋಗ್ಯ ಅಧಿಕಾರಿ ಹರ್ಷಿತ ಮಕ್ಕಳ ಆರೋಗ್ಯ ಬಗ್ಗೆ ಮಾಹಿತಿ ನೀಡಿದರು. ವೀರಕಂಭ ಗ್ರಾಮ ವ್ಯಾಪ್ತಿಯ ಶಾಲೆಗಳಾದ ಮಜಿ, ಕೆಲಿಂಜ, ಬಾಯಿಲ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳ ವಿಷಯಗಳಿಗೆ ಸಂಬಂಧಪಟ್ಟ ಎಲ್ಲ ಇಲಾಖೆಗಳು ಭಾಗವಹಿಸಬೇಕೆಂದು ಮಕ್ಕಳು ಬೇಡಿಕೆ ಇಟ್ಟರು. ಮಜಿ ಶಾಲೆಯ ಮಕ್ಕಳು ತಮ್ಮ ಶಾಲೆಗೆ  ಸ್ಯಾನಿಟರಿ ಪ್ಯಾಡ್ ಬರ್ನರ್,ಶಾಲಾ ಆವರಣ ಗೋಡೆ, ಮಕ್ಕಳ ಸುರಕ್ಷಾ ದೃಷ್ಟಿಯಿಂದ ಸಿಸಿ ಕ್ಯಾಮರ, ಶೌಚಾಲಯಕ್ಕೆ ನೀರಿನ ಟ್ಯಾಂಕಿ, ಕ್ರೀಡಾ ಸಾಮಗ್ರಿಗಳು, ವಾಚನಾಲಯ, ಕಂಪ್ಯೂಟರ್,ರಸ್ತೆಗೆ ಸೂಚನಾ ಫಲಕ ಮೊದಲಾದ ಬೇಡಿಕೆಗಳನ್ನು ನೀಡಿದರು.  ಕೆಲಿಂಜ  ಶಾಲಾ ಮಕ್ಕಳು ಶಾಲಾ ಆವರಣ ಎದುರು ಗಿಡಗಂಟಿಗಳಿದ್ದು, ರಸ್ತೆ ದಾಟುವಾಗ ವಾಹನಗಳು ಗಮನಕ್ಕೆ ಬರೋದಿಲ್ಲ ಹಾಗೂ ಪರೀಕ್ಷೆಗಳು ಹತ್ತಿರ ಬರುವ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ತೆರವಾದ ಕಾರಣ ಶಿಕ್ಷಕರ ಕೊರತೆ ಯಾಗಿದೆ ಎಂದರು.

ಗ್ರಾಮ ಸಭಾ ವೇದಿಕೆಯಲ್ಲಿ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತ, ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುಷ್ಪ, ಕಾರ್ಯದರ್ಶಿ ಸವಿತಾ, ಮೊದಲಾದವರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಸದಸ್ಯರುಗಳು, ಗ್ರಾಮ ಆರೋಗ್ಯ ಸುರಕ್ಷ ಆಧಿಕಾರಿ ಜ್ಯೋತಿ, ಮಜಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್, ಕೆಲಿಂಜ ಶಾಲಾ ಶಿಕ್ಷಕಿ ಶ್ವೇತಾ, ಬಾಯಿಲ ಶಾಲಾ ಶಿಕ್ಷಕಿ ವಾರಿಜಾಕ್ಷಿ,ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts