ಡಾ. ವಸಂತಕುಮಾರ ಪೆರ್ಲ ಅವರ ಐತಿಹಾಸಿಕ ತುಳು ಕೃತಿ ‘ಪುಳ್ಕೂರ ಬಾಚೆ’ ಬಿಡುಗಡೆ

https://www.opticworld.net/

ಜಾಹೀರಾತು

ಒಡಿಯೂರು: ಶ್ರೀಕ್ಷೇತ್ರ ಒಡಿಯೂರಿನಲ್ಲಿ ಫೆ. 6 ರಂದು ಜರಗಿದ 25 ನೇ ವರ್ಷದ ಬೆಳ್ಳಿಹಬ್ಬದ ತುಳು ಸಾಹಿತ್ಯ ಸಮ್ಮೇಳನದಲ್ಲಿ ಪ್ರಸಿದ್ಧ ಕವಿ-ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರ ‘ಮಾಯಿಪ್ಪಾಡಿದ ವೀರಪುರುಷೆ ಪುಳ್ಕೂರ ಬಾಚೆ’ ಎಂಬ ಐತಿಹಾಸಿಕ ತುಳು ಕೃತಿಯನ್ನು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿದರು. ಹೆಚ್ಚು ಹೆಚ್ಚು ತುಳು ಕೃತಿಗಳು ಪ್ರಕಟವಾದಷ್ಟೂ ತುಳು ಭಾಷೆ – ಸಾಹಿತ್ಯ ಶ್ರೀಮಂತವಾಗುತ್ತದೆ ಎಂದು ಸ್ವಾಮೀಜಿ ಈ ಸಂದರ್ಭದಲ್ಲಿ ನುಡಿದರು.

ಸುಮಾರು ಮುನ್ನೂರು ವರ್ಷಗಳ ಹಿಂದೆ ಕುಂಬಳೆ ರಾಜ್ಯದ ಮಾಯಿಪ್ಪಾಡಿ ಸಂಸ್ಥಾನದಲ್ಲಿ ಜಟ್ಟಿಯಾಗಿದ್ದ, ಸೇನಾ ದಂಡನಾಯಕನೂ ಆಗಿದ್ದ ವೀರಪುರುಷ ಪುಳ್ಕೂರ ಬಾಚ ತುಳುನಾಡಿನ ಓರ್ವ ಕಟ್ಟಾಳು ಆಗಿದ್ದ. ಕಲ್ಲಾಟದ ಬಾಚ ಎಂದೇ ಪ್ರಸಿದ್ಧನಾಗಿದ್ದ ಈ ಐತಿಹಾಸಿಕ ವ್ಯಕ್ತಿ ದೊಡ್ಡ ದೊಡ್ಡ ಕಲ್ಲುಬಂಡೆಗಳನ್ನು ಹೊತ್ತು ಸಾಗಿಸುವ ಹೊಂತಗಾರಿಯೂ ಆಗಿದ್ದ. ಆತನ ಬದುಕಿನ ಬಗೆಗಿನ ಸ್ವಾರಸ್ಯಕರ ಘಟನೆಗಳನ್ನು ಐತಿಹ್ಯಗಳ ಆಧಾರದಿಂದ ಕಲೆಹಾಕಿ ಡಾ. ಪೆರ್ಲ ಅವರು ಈ ಕೃತಿರಚನೆ ಮಾಡಿದ್ದಾರೆ. ಜೊತೆಗೆ ಸುಮಾರು ಸಾವಿರದ ಐನೂರು ವರ್ಷಗಳ ಇತಿಹಾಸವಿರುವ, ಕದಂಬರಾಜರ ಕವಲಾಗಿರುವ ಮಾಯಿಪ್ಪಾಡಿಯ ಅರಸರ ಚರಿತ್ರೆಯನ್ನೂ ತಿಳಿಸಿದ್ದಾರೆ.

ಈಗ ಕೇರಳಕ್ಕೆ ಸೇರಿ ಹೋಗಿ ತುಳುನಾಡಿನ ಸಂಪದ್ಭರಿತ ಐತಿಹಾಸಿಕ ಪರಂಪರೆ ಕಣ್ಮರೆಯಾಗುತ್ತಿರುವ ಮತ್ತು ನಷ್ಟಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಪುಳ್ಕೂರ ಬಾಚ ಕೃತಿಯು ತುಳುನಾಡಿನ ಹಲವು ಐತಿಹಾಸಿಕ ಸಂಗತಿಗಳನ್ನು ಮತ್ತೆ ನಮಗೆ ನೆನಪಿಸುತ್ತದೆ. ಬಾಚನ ಇತಿಹಾಸವನ್ನು ತಿಳಿಸುವ ಜೊತೆಗೆ ತುಳುನಾಡಿನ ಆ ಕಾಲದ ಹಲವು ಅಪರೂಪದ ಸಾಂಸ್ಕೃತಿಕ ಸಂಗತಿಗಳನ್ನು ಈ ಕೃತಿಯಲ್ಲಿ ಅನಾವರಣಗೊಳಿಸಲಾಗಿದೆ.

ಭಾಸ್ಕರ ರೈ ಕುಕ್ಕುವಳ್ಳಿ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ. ಸಿ. ಭಂಡಾರಿ, ತುಳುನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ತುಳುಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತುಳು ಸಾಹಿತ್ಯ ಸಮ್ಮೇಳನದ ಪ್ರಧಾನ ಸಂಚಾಲಕ ಡಾ. ವಸಂತಕುಮಾರ ಪೆರ್ಲ, ಇನ್ನೋರ್ವ ಸಂಚಾಲಕ ಕದ್ರಿ ನವನೀತ ಶೆಟ್ಟಿ ವೇದಿಕೆಯಲ್ಲಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಡಾ. ವಸಂತಕುಮಾರ ಪೆರ್ಲ ಅವರ ಐತಿಹಾಸಿಕ ತುಳು ಕೃತಿ ‘ಪುಳ್ಕೂರ ಬಾಚೆ’ ಬಿಡುಗಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*