ಕಶೆಕೋಡಿ: ರಥ ಸಮರ್ಪಣೆ, ವೈಭವದ ಬ್ರಹ್ಮರಥೋತ್ಸವ

ಕಶೆಕೋಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಜಾತ್ರಾ ಮಹೋತ್ಸವ ನೂತನ ಬ್ರಹ್ಮರಥ ಸಮರ್ಪಣೆ ಹಾಗೂ ಬ್ರಹ್ಮರಥೋತ್ಸವ ವೈಭವದಿಂದ ನಡೆಯಿತು.

https://www.opticworld.net/

ಕಶೆಕೋಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಜಾತ್ರಾ ಮಹೋತ್ಸವ, ನೂತನ ಬ್ರಹ್ಮರಥ ಸಮರ್ಪಣೆ ಹಾಗೂ ಬ್ರಹ್ಮರಥೋತ್ಸವ ನಡೆಯಿತು.  ಆಡಳಿತ ಮೊಕ್ತೇಸರ ಕಲ್ಲೇಗ ಸಂಜೀವ ನಾಯಕ್ , ಸಮಾಜದ ಪ್ರಮುಖರಾದ ಮನೀಶ್ ಜಿ. ದಾಬೋಲ್‌ಕರ್ ಅಧ್ಯಕ್ಷರು ಗೌಡ್ ಬ್ರಾಹ್ಮಣ ಸಭಾ ಗೋರೆಗಾವ್, ವಿಕಾಸ್ ವಾಲ್‌ವಾಲ್‌ಕರ್ ಸಮರ್ಥ್ ಡೆವಲಪ್ಪರ್ಸ್ ಮುಂಬೈ, ಡಾ. ಜಯಪ್ರಕಾಶ್ ಎಮ್, ಸಂದೀಪ್ ಪ್ರಭು, ಜಯಂತ್ ನಾಯಕ್ ಬೆಂಗಳೂರು, ಸಂಜಯ್ ಪ್ರಭು ಮಂಗಳೂರು, ಮುಕುಂದ ಪ್ರಭು, ಆನುವಂಶಿಕ ಮೊಕ್ತೇಸರ ಕಂಟಿಕ ಗೋಪಾಲ ಶೆಣೈ , ಕಾರ್ಯದರ್ಶಿ ಶಾಂತಾರಾಮ ಶೆಣೈ ಹಾಗೂ ಆಡಳಿತ ಮಂಡಳಿ , ಜೀರ್ಣೋದ್ಧಾರ ಸಮಿತಿ , ಉತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗೌಡ್ ಬ್ರಾಹ್ಮಣ ಸಭಾ ಗೋರೆಗಾಂ ಇದರ ಅಧ್ಯಕ್ಷ ಮನೀಶ್ ಜಿ. ದಾಬೋಲ್‌ಕರ್ ಮಾತನಾಡಿ ಕುಡಾಲ ಗೌಡ್ ಬ್ರಾಹ್ಮಣ ಸಮಾಜದ ಮತ್ತು ಕುಟುಂಬ ವ್ಯವಸ್ಥೆಯ ಮತ್ತು ಕೈಗೊಳ್ಳಬೇಕಾದ ಕಾರ್ಯಯೋಜನೆಗಳ ಬಗ್ಗೆ ಮಾತನಾಡಿದರು. ಗುರು ಶಿಷ್ಯ ಪರಂಪರೆಯೊಂದಿಗೆ ಸ್ವಾಭಿಮಾನದಿಂದ ಸಮಾಜವು ಶಕ್ತಿ ಶಾಲಿಯಾಗಬೇಕೆಂದರು.
ಡಾ. ಜಯಪ್ರಕಾಶ್ ಎಮ್. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಡಾಲ್ ದೇಶಸ್ಥ ಸಮಾಜವನ್ನು ಸಂಘಟಿಸುವ ಬಗ್ಗೆ ಆಶಯ ಭಾಷಣ ಮಾಡಿದರು. ಉಪನ್ಯಾಸಕಿ ಡಾ. ವಿಜಯಲಕ್ಷ್ಮೀ ನಿರೂಪಿಸಿದರು. ಶಿವಾನಂದ ಪ್ರಭು ವಂದಿಸಿದರು.
ಪೂರ್ವಾಹ್ನ ಗಣಪತಿ ಹೋಮ , ಪ್ರಾತಃ ಪೂಜೆ, ಪ್ರಾತಃ ಬಲಿ, ರಥ ಕಲಶ ಪೂಜೆ, ನವಕ ಪ್ರಧಾನ ನಡೆಯಿತು. ಆ ಬಳಿಕ ದೇವರ ಬಲಿ ಉತ್ಸವ , ದರ್ಶನ ಬಲಿ, ಬಟ್ಟಲು ಕಾಣಿಕೆ, ರಥ ಕಲಶಾಭಿಶೇಕ ನೆರವೇರಿತು. ರಾತ್ರಿ ದಾಬೋಳಿ ಮಠ ಸಂಸ್ಥಾನದ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನೂತನ ಬ್ರಹ್ಮ ರಥ ಸಮರ್ಪಣೆ , ರಥಾರೋಹಣ ನಡೆಯಿತು. ವಿಕಾಸ್ ವಾಲ್‌ವಾಲ್‌ಕರ್ , ಅನಿತಾ ಮತ್ತು ಎಂ.ಪಿ.ಪ್ರಭು ನಾಸಿಕ್, ವಿಜಯ ಮತ್ತು ಶ್ರೀ ಮುಕುಂದ ಪ್ರಭು ಇವರಿಗೆ ಗೌರವ ಸಮರ್ಪಣೆ ಇತ್ತು.
ನೂತನ ನಿರ್ಮಾನ ಶಿಲ್ಪಿ ಹರೀಶ್ ಆಚಾರ್ಯ ಬೋಳಿಯಾರು ಸನ್ಮಾನ ಮಹಾದೇವ ಗಣಪತಿ ಭಜನಾ ಮಂಡಳಿ ದೇಲಂಪುರಿ ವೇಣೂರು ಕುಣಿತ ಭಜನೆ ಇತ್ತು. ಸುಡುಮದ್ದು ಪ್ರದರ್ಶನದೊಂದಿಗೆ ಬ್ರಹ್ಮ ರತೋತ್ಸವ ರಥಬೀದಿಯಲ್ಲಿ ವಿಜೃಂಭಣೆಯಿಂದ ನಡೆಯಿತು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಶೆಕೋಡಿ: ರಥ ಸಮರ್ಪಣೆ, ವೈಭವದ ಬ್ರಹ್ಮರಥೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*