ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಬಂಟ್ವಾಳದಲ್ಲಿ ಸಮಾಲೋಚನಾ ಸಭೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗೀ ಸಹಿತ ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆ ಸಮರ್ಪಣೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆಗೆ ಸಂಬಂಧಿಸಿ ಬಂಟ್ವಾಳ ತಾಲೂಕು ಸಮಿತಿಯ ಪ್ರಮುಖರ ಸಮಾಲೋಚನಾ ಸಭೆ ಗುರುವಾರ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಕಚೇರಿಯಲ್ಲಿ ನಡೆಯಿತು.

https://www.opticworld.net/

ಬ್ರಹ್ಮಕಲಶೋತ್ಸವದ ದ.ಕ.ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಚಂದ್ರಹಾಸ ಡಿ.ಶೆಟ್ಟಿ ಅವರು ಮಾತನಾಡಿ, ಬ್ರಹ್ಮಕಲಶದ ಹಿನ್ನೆಲೆ ನಡೆದ ನವದುರ್ಗಾ ಲೇಖನ ಯಜ್ಞದಲ್ಲಿ ಜಿಲ್ಲೆಯಿಂದ 9,999 ಮಂದಿ ಪಾಲ್ಗೊಂಡಿದ್ದು, ಬಂಟ್ವಾಳದಿಂದ 1200 ಮಂದಿ ಪಾಲ್ಗೊಂಡಿದ್ದಾರೆ. ಸುಮಾರು 99 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲುವ ಕಾಪು ಕ್ಷೇತ್ರವು ದಕ್ಷಿಣ ಭಾರತದಲ್ಲೇ ವಿಶೇಷವಾಗಿದೆ. 20 ಕೆಜಿ ಬಂಗಾರದ ಸ್ವರ್ಣ ಗದ್ದುಗೆಗೆ ಕೇವಲ 2 ತಿಂಗಳಲ್ಲಿ ಭಕ್ತರು ಬಂಗಾರ ಸಮರ್ಪಣೆ ಮಾಡಿದ್ದು, 150 ಕೆಜಿ ಬೆಳ್ಳಿಯ ರಥ, ಅಯೋಧ್ಯೆಯ ಬಳಿಕ 2ನೇ ಅತಿ ದೊಡ್ಡ ಗಂಟೆಯ 40 ಲಕ್ಷ ರೂ.ವೆಚ್ಚದಲ್ಲಿ ಸಿದ್ಧಗೊಂಡಿದ್ದು, ಅದನ್ನು ಒಮ್ಮೆ ಬಾರಿಸಿದರೆ 5 ಕಿ.ಮೀ.ಕಂಪನಗೊಳ್ಳುತ್ತದೆ. ಹೀಗೆ ಹಲವು ವಿಶೇಷತೆಗಳಿರುವ ಕ್ಷೇತ್ರದ ಬ್ರಹ್ಮಕಲಶ 9 ದಿನಗಳ ಕಾಲ ನಡೆಯಲಿದ್ದು, ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಳ್ಳುವ ನಿಟ್ಟಿನಲ್ಲಿ ತಾಲೂಕು ಸಮಿತಿಯವರು ಪ್ರಯತ್ನಿಸಬೇಕಿದೆ.
ಫೆ. 22ರಂದು ದಕ್ಷಿಣ ವಾಹಿನಿ ಹೆಸರಿನಲ್ಲಿ ದ.ಕ.ಜಿಲ್ಲೆಯಿಂದ ಹೊರೆಕಾಣಿಕೆ ಸಮರ್ಪಣೆಗೊಳ್ಳಲಿದ್ದು, ಬಂಟ್ವಾಳದ ಪ್ರತಿ ಭಾಗದಿಂದಲೂ ಹೊರೆಕಾಣಿಕೆ ಸಮರ್ಪಣೆಯಾಗಬೇಕಿದೆ. ತಾಲೂಕಿನ ಪ್ರಮುಖರು ಪ್ರತಿಯೊಂದು ಧಾರ್ಮಿಕ ಕ್ಷೇತ್ರದ ಜತೆಗೆ ಭಕ್ತರಲ್ಲಿ ವಿನಂತಿಸಬೇಕಿದ್ದು, ಮೊದಲೇ ಸಮರ್ಪಣೆ ಮಾಡುವವರು ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಕಚೇರಿಯಲ್ಲಿ ನೀಡಬಹುದಾಗಿದೆ. ಅಕ್ಕಿ ಸಮರ್ಪಣೆ ಮಾಡುವವರು ಸ್ವಸ್ತಿಕ್ ಬ್ರಾಂಡ್‌ಗೆ ಆದ್ಯತೆ ನೀಡಬೇಕಿದ್ದು, ಇಲ್ಲದೇ ಇದ್ದರೆ ಡಾಲರ್, ಟೈಗರ್ ಬ್ರಾಂಡ್ ನೀಡಬಹುದು. ಜತೆಗೆ ಬ್ರಹ್ಮಕಲಶದ ಸೇವಾ ಕಾರ್ಯದಲ್ಲೂ ಭಾಗವಹಿಸಲು ಅವಕಾಶವಿದೆ ಎಂದರು.

ಬಂಟ್ವಾಳ ತಾಲೂಕು ಸಂಚಾಲಕ ತೇವು ತಾರಾನಾಥ ಕೊಟ್ಟಾರಿ ಅವರು ಆಮಂತ್ರಣ ಹಂಚಿಕೆಯ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಸಮಿತಿ ಪ್ರಮುಖರಾದ ಗಣೇಶ್ ಸುವರ್ಣ, ಕರುಣೇಂದ್ರ ಪೂಜಾರಿ, ಉಮೇಶ್ ಸಾಲ್ಯಾನ್ ಬೆಂಜನಪದವು, ಸೀತಾರಾಮ ಶೆಟ್ಟಿ, ಶಂಕರ ಶೆಟ್ಟಿ, ಸತೀಶ್ ಶೆಟ್ಟಿ ಮೊಡಂಕಾಪು, ಭಾರತಿ ಚೌಟ, ಪುಷ್ಪರಾಜ್ ಶೆಟ್ಟಿ, ವಸಂತಿ ಎಲ್.ಶೆಟ್ಟಿ, ಹರೀಶ್ ಪೆದಮಲೆ, ಜಗನ್ನಾಥ ರೈ ಮೇರಾವು, ನವೀನ್ ಕೊಡ್ಮಾಣ್, ಮಣಿಮಾಲಾ ಶೆಟ್ಟಿ, ಉಮಾ ಚಂದ್ರಶೇಖರ ತುಂಬೆ ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಬಂಟ್ವಾಳದಲ್ಲಿ ಸಮಾಲೋಚನಾ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*