ಬಂಟ್ವಾಳ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಬಂಟ್ವಾಳದಲ್ಲಿ ಸಮಾಲೋಚನಾ ಸಭೆ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗೀ ಸಹಿತ ಕಾಪು ಸಾವಿರ ಸೀಮೆಯ ಒಡತಿ ಶ್ರೀ ಮಾರಿಯಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನಿಂದ ಹೊರೆಕಾಣಿಕೆ ಸಮರ್ಪಣೆ ಹಾಗೂ ಆಮಂತ್ರಣ ಪತ್ರಿಕೆ ವಿತರಣೆಗೆ ಸಂಬಂಧಿಸಿ ಬಂಟ್ವಾಳ ತಾಲೂಕು ಸಮಿತಿಯ ಪ್ರಮುಖರ ಸಮಾಲೋಚನಾ ಸಭೆ ಗುರುವಾರ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಕಚೇರಿಯಲ್ಲಿ ನಡೆಯಿತು.

https://www.opticworld.net/

ಬ್ರಹ್ಮಕಲಶೋತ್ಸವದ ದ.ಕ.ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಚಂದ್ರಹಾಸ ಡಿ.ಶೆಟ್ಟಿ ಅವರು ಮಾತನಾಡಿ, ಬ್ರಹ್ಮಕಲಶದ ಹಿನ್ನೆಲೆ ನಡೆದ ನವದುರ್ಗಾ ಲೇಖನ ಯಜ್ಞದಲ್ಲಿ ಜಿಲ್ಲೆಯಿಂದ 9,999 ಮಂದಿ ಪಾಲ್ಗೊಂಡಿದ್ದು, ಬಂಟ್ವಾಳದಿಂದ 1200 ಮಂದಿ ಪಾಲ್ಗೊಂಡಿದ್ದಾರೆ. ಸುಮಾರು 99 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲುವ ಕಾಪು ಕ್ಷೇತ್ರವು ದಕ್ಷಿಣ ಭಾರತದಲ್ಲೇ ವಿಶೇಷವಾಗಿದೆ. 20 ಕೆಜಿ ಬಂಗಾರದ ಸ್ವರ್ಣ ಗದ್ದುಗೆಗೆ ಕೇವಲ 2 ತಿಂಗಳಲ್ಲಿ ಭಕ್ತರು ಬಂಗಾರ ಸಮರ್ಪಣೆ ಮಾಡಿದ್ದು, 150 ಕೆಜಿ ಬೆಳ್ಳಿಯ ರಥ, ಅಯೋಧ್ಯೆಯ ಬಳಿಕ 2ನೇ ಅತಿ ದೊಡ್ಡ ಗಂಟೆಯ 40 ಲಕ್ಷ ರೂ.ವೆಚ್ಚದಲ್ಲಿ ಸಿದ್ಧಗೊಂಡಿದ್ದು, ಅದನ್ನು ಒಮ್ಮೆ ಬಾರಿಸಿದರೆ 5 ಕಿ.ಮೀ.ಕಂಪನಗೊಳ್ಳುತ್ತದೆ. ಹೀಗೆ ಹಲವು ವಿಶೇಷತೆಗಳಿರುವ ಕ್ಷೇತ್ರದ ಬ್ರಹ್ಮಕಲಶ 9 ದಿನಗಳ ಕಾಲ ನಡೆಯಲಿದ್ದು, ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಳ್ಳುವ ನಿಟ್ಟಿನಲ್ಲಿ ತಾಲೂಕು ಸಮಿತಿಯವರು ಪ್ರಯತ್ನಿಸಬೇಕಿದೆ.
ಫೆ. 22ರಂದು ದಕ್ಷಿಣ ವಾಹಿನಿ ಹೆಸರಿನಲ್ಲಿ ದ.ಕ.ಜಿಲ್ಲೆಯಿಂದ ಹೊರೆಕಾಣಿಕೆ ಸಮರ್ಪಣೆಗೊಳ್ಳಲಿದ್ದು, ಬಂಟ್ವಾಳದ ಪ್ರತಿ ಭಾಗದಿಂದಲೂ ಹೊರೆಕಾಣಿಕೆ ಸಮರ್ಪಣೆಯಾಗಬೇಕಿದೆ. ತಾಲೂಕಿನ ಪ್ರಮುಖರು ಪ್ರತಿಯೊಂದು ಧಾರ್ಮಿಕ ಕ್ಷೇತ್ರದ ಜತೆಗೆ ಭಕ್ತರಲ್ಲಿ ವಿನಂತಿಸಬೇಕಿದ್ದು, ಮೊದಲೇ ಸಮರ್ಪಣೆ ಮಾಡುವವರು ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಕಚೇರಿಯಲ್ಲಿ ನೀಡಬಹುದಾಗಿದೆ. ಅಕ್ಕಿ ಸಮರ್ಪಣೆ ಮಾಡುವವರು ಸ್ವಸ್ತಿಕ್ ಬ್ರಾಂಡ್‌ಗೆ ಆದ್ಯತೆ ನೀಡಬೇಕಿದ್ದು, ಇಲ್ಲದೇ ಇದ್ದರೆ ಡಾಲರ್, ಟೈಗರ್ ಬ್ರಾಂಡ್ ನೀಡಬಹುದು. ಜತೆಗೆ ಬ್ರಹ್ಮಕಲಶದ ಸೇವಾ ಕಾರ್ಯದಲ್ಲೂ ಭಾಗವಹಿಸಲು ಅವಕಾಶವಿದೆ ಎಂದರು.

ಜಾಹೀರಾತು

ಬಂಟ್ವಾಳ ತಾಲೂಕು ಸಂಚಾಲಕ ತೇವು ತಾರಾನಾಥ ಕೊಟ್ಟಾರಿ ಅವರು ಆಮಂತ್ರಣ ಹಂಚಿಕೆಯ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಸಮಿತಿ ಪ್ರಮುಖರಾದ ಗಣೇಶ್ ಸುವರ್ಣ, ಕರುಣೇಂದ್ರ ಪೂಜಾರಿ, ಉಮೇಶ್ ಸಾಲ್ಯಾನ್ ಬೆಂಜನಪದವು, ಸೀತಾರಾಮ ಶೆಟ್ಟಿ, ಶಂಕರ ಶೆಟ್ಟಿ, ಸತೀಶ್ ಶೆಟ್ಟಿ ಮೊಡಂಕಾಪು, ಭಾರತಿ ಚೌಟ, ಪುಷ್ಪರಾಜ್ ಶೆಟ್ಟಿ, ವಸಂತಿ ಎಲ್.ಶೆಟ್ಟಿ, ಹರೀಶ್ ಪೆದಮಲೆ, ಜಗನ್ನಾಥ ರೈ ಮೇರಾವು, ನವೀನ್ ಕೊಡ್ಮಾಣ್, ಮಣಿಮಾಲಾ ಶೆಟ್ಟಿ, ಉಮಾ ಚಂದ್ರಶೇಖರ ತುಂಬೆ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts