ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟುವಿನಲ್ಲಿ ನೀರು ಸಂಗ್ರಹಣೆಗಾಗಿ ಗೇಟ್ ಅಳವಡಿಸಿದ ಪರಿಣಾಮವಾಗಿ, ಸ್ಥಳೀಯ ಕೃಷಿಕರ ತೋಟಗಳಿಗೆ ನೀರು ನುಗ್ಗಿದ ಹಿನ್ನೆಲೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸ್ಥಳಕ್ಕೆ ಭೇಟಿ ನೀಡಿ ಗೇಟ್ ತೆರವುಗೊಳಿಸಲು ಸೂಚನೆ ನೀಡಿದರು.
https://www.opticworld.net/
ಜಾಹೀರಾತು
ಅಣೆಕಟ್ಟಿನ ಎಲ್ಲ ಗೇಟ್ ಗಳನ್ನು ಮುಚ್ಚಿ ಸುಮಾರು 5 ಮೀಟರ್ ನಷ್ಟು ನೀರು ಶೇಖರಣೆಯಾದ ಹಿನ್ನೆಲೆ ಸಮೀಪದ ಪಣೆಕಳ, ಮಣಿಹಳ್ಳ ಪ್ರದೇಶಗಳಿಗೆ ನೀರು ನುಗ್ಗಿದ್ದಾಗಿ ಕೃಷಿಕರು ದೂರಿದ್ದರು. ಈ ವಿಷಯದ ಕುರಿತು ಮಂಗಳೂರಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದ ಕೆಡಿಪಿ ಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಪ್ರಸ್ತಾಪಿಸಿದ್ದರು. ಮಂಗಳೂರಿನ ಸಭೆ ಮುಗಿದ ಬಳಿಕ ಕಿಂಡಿ ಅಣೆಕಟ್ಟಿನ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಗೇಟ್ ತೆರವಿಗೆ ಸೂಚನೆ ನೀಡಿದರು. ಅದರಂತೆ ಏಳು ಗೇಟ್ ಗಳನ್ನು ತೆರವು ಮಾಡಲಾಯಿತು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಜಕ್ರಿಬೆಟ್ಟು ಡ್ಯಾಂ ನೀರು ಸಂಗ್ರಹದಿಂದ ತೋಟಗಳಿಗೆ ನೀರು: ಗೇಟ್ ತೆರವುಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ"
Be the first to comment on "ಜಕ್ರಿಬೆಟ್ಟು ಡ್ಯಾಂ ನೀರು ಸಂಗ್ರಹದಿಂದ ತೋಟಗಳಿಗೆ ನೀರು: ಗೇಟ್ ತೆರವುಗೊಳಿಸಲು ಶಾಸಕ ರಾಜೇಶ್ ನಾಯ್ಕ್ ಸೂಚನೆ"