ಬಂಟ್ವಾಳ

ಕನ್ನಡ ಭವನದಲ್ಲಿ ಏಕವ್ಯಕ್ತಿ ತಾಳಮದ್ದಳೆ ’ಭಾರತ ಮಾರುತಿ’

https://www.opticworld.net/

ಬಂಟ್ವಾಳದ ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಜೋಡುಮಾರ್ಗದ ಅಭಿರುಚಿ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಭಾರತ ಮಾರುತಿ ಎಂಬ ಏಕವ್ಯಕ್ತಿ ತಾಳಮದ್ದಳೆ ಕಾರ್ಯಕ್ರಮ ನಡೆಯಿತು.


ಅನಂತ ಹೆಗಡೆ ದಂತಳಿಗೆ ಭಾಗವತಿಕೆಯಲ್ಲಿ ಮಹಾಭಾರತದ ಭೀಮಸೇನನ ಪಾತ್ರದ ಮೂಲಕ ದಿವಾಕರ ಹೆಗಡೆಯವರು ಇಡೀ ಮಹಾಭಾರತದ ಕಥಾಸಾರವನ್ನು ಕಟ್ಟಿಕೊಟ್ಟರು. ಕಲಾವಿದ ಎ.ಪಿ.ಪಾಠಕ್ ಮದ್ದಳೆಯಲ್ಲಿ ಸಹಕರಿಸಿದರು. ಕಲಾವಿದರ ಪರಿಚಯವನ್ನು ಅಭಿರುಚಿ ಜೋಡುಮಾರ್ಗದ ಮಹಾಬಲೇಶ್ವರ ಹೆಬ್ಬಾರ ಮಾಡಿದರು. ಭೀಮಸೇನನ ಪಾತ್ರದ ಮಾತಿನಲ್ಲಿ ಇಡೀ ಸನ್ನಿವೇಶವನ್ನು ಕಟ್ಟಿಕೊಡುವ ಏಕವ್ಯಕ್ತಿ ತಾಳಮದ್ದಳೆಯೊಂದು ವಿಶಿಷ್ಟ ಪ್ರಯೋಗವಾಗಿದ್ದು, ಬಿ.ಸಿ.ರೋಡಿನಲ್ಲಿ ಇಂಥ ಕಾರ್ಯಕ್ರಮಗಳು ವಿರಳ. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಗೌರವ ಪ್ರಧಾನ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ, ವಿ.ಸು.ಭಟ್, ಅಭಿರುಚಿಯ ಸುಂದರ ರಾವ್, ಹಿರಿಯ ರಂಗಕರ್ಮಿ ಮೂರ್ತಿ ದೇರಾಜೆ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ