ಬಂಟ್ವಾಳ: ಕಾಂಗ್ರೇಸ್ ಸಕ್ರೀಯ ಕಾರ್ಯಕರ್ತ ಕೈಕಂಬ ಸಮೀಪದ ಶಾಂತಿ ಅಂಗಡಿ ನಿವಾಸಿ
ಮಹಮ್ಮದ್ ಆಲಿ( 72) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಕೊನೆಯುಸಿರೆಳೆದರು.
ಸ್ನೇಹ ಜೀವಿಯಾಗಿದ್ದ ಇವರು ಹಲವಾರು ಸಾಮಾಜಿಕ ಕಾರ್ಯಗಳಿಗೆ ಮುನ್ನುಡಿ ಬರೆದಿದ್ದಾರೆ. ಕೈಕಂಬದ ಮ್ಯೋಯುದ್ದೀನ್ ಜುಮಾ ಮಸೀದಿಯ ಮಾಜಿ ಅಧ್ಯಕ್ಷನಾಗಿ, ವಕ್ಪ್ ಬೋರ್ಡ್ ಸದಸ್ಯನಾಗಿ, ಮುಸ್ಲಿಂ ಯಂಗ್ ಮ್ಯಾನ್ ಸೊಸೈಟಿಯ ಸದಸ್ಯನಾಗಿ, ಜಮಿಹಯ್ಯತುಲ ಫಲಾಹ್ ಇದರ ಮಾಜಿ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದಾರೆ.
ಇವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರು ಸಂತಾಪ ಸೂಚಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…